ಕೆಎಸ್ ಈಶ್ವರಪ್ಪ 
ರಾಜ್ಯ

ಪ್ರಚೋದನಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. 

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. 

ನಿಜಲಿಂಗಪ್ಪ ಬಡಾವಣೆಯ ಕಾಂಗ್ರೆಸ್ ಮುಖಂಡ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ಇಲ್ಲಿನ ಬಡಾವಣೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1) (ಸಿ), 505 (2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೆಎಸ್ ಈಶ್ವರಪ್ಪ ನೀಡಿರುವ ಹೇಳಿಕೆ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆ ಉಂಟುಮಾಡುತ್ತದೆ. ಗಲಭೆಗಳು ಜರುಗಬಹುದೆಂದು ಗೊತ್ತಿದ್ದರೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹನುಮಂತ ದೂರು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT