ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ 
ರಾಜ್ಯ

ಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್!

ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಡವಟ್ಟು ಮಾಡಿಕೊಂಡಿದ್ದಾರೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್‌ ಶೂಟ್‌ ಲೋಕೇಶನ್‌ ಮಾಡಿಕೊಂಡಿರುವ ಅಭಿಷೇಕ್‌, ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ.

ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ. ಅಭಿಷೇಕ್ ಎಂಬುವವರು ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ