ರಾಜ್ಯ

ಬೆಳ್ಳಂದೂರು ಕೆರೆಯಲ್ಲಿ ಎಸ್‌ಟಿಪಿ ಕಾಮಗಾರಿ ವೇಗಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಳ್ಳಂದೂರು ಕೆರೆಯಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಾಣ ಕಾರ್ಯ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಅವರು ಗುರುವಾರ ಸೂಚನೆ ನೀಡಿದರು.

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಾಣ ಕಾರ್ಯ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಅವರು ಗುರುವಾರ ಸೂಚನೆ ನೀಡಿದರು.

ಜೌಗು ಭೂಮಿ ಪ್ರಾಧಿಕಾರದ ಅನೌಪಚಾರಿಕ ಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಬೆಳ್ಳಂದೂರು ಕೆರೆಗೆ ಸಂಸ್ಕರಣೆಯಾಗದೆ ನೇರವಾಗಿ ತ್ಯಾಜ್ಯ ಜಲ ಹರಿಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ದಂಡ ವಿಧಿಸಿದ್ದು, ಈ ವರ್ಷಾಂತ್ಯದೊಳಗೆ ಎಸ್‌ಟಿಪಿ ನಿರ್ಮಿಸಬೇಕಿದ್ದರೂ ವಿಳಂಬ ಆಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಬಳಿಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದು ಕಾಮಗಾರಿ ತ್ವರಿತಗೊಳಿಸುವಂತೆ ತಿಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ನೀರಿನ ತೀವ್ರ ಸಮಸ್ಯೆ ಎದುರಾಗಲಿದ್ದು, ಜಲಮೂಲಗಳನ್ನು ಮತ್ತು ಕೆರೆ, ಕಟ್ಟೆಗಳನ್ನು ಸಂರಕ್ಷಣೆ ಮಾಡಬೇಕಾದ ಅನಿವಾರ್ಯ ಇದೆ. ನೇರವಾಗಿ ಸಂಸ್ಕರಣೆ ಮಾಡದೆ ತ್ಯಾಜ್ಯ ಹರಿಸುತ್ತಿರುವುದರಿಂದ ಕೆರೆಗಳ ನೀರು ಕಲುಷಿತವಾಗಿ ನೊರೆ ಹೊರಹೊಮ್ಮುವ ಸ್ಥಿತಿ ನಿರ್ಮಾಣವಾಗಿದೆ. ಅಂತರ್ಜಲವೂ ಕಲುಷಿತವಾಗುತ್ತಿದೆ. ಈ ಪ್ರಕರಣವನ್ನು ಎನ್‌ಜಿಟಿ ಗಂಭೀರವಾಗಿ ಪರಿಗಣಿಸಿ, ದಂಡ ವಿಧಿಸಿದ್ದರೂ ಸಂಸ್ಕರಣಾ ಘಟಕ ನಿರ್ಮಾಣದಲ್ಲಿ ವಿಳಂಬ ಆಗುತ್ತಿರುವುದು ಸರಿಯಲ್ಲ.

ಎಲ್ಲ ಜಲಮೂಲಗಳ ಎಸ್‌ಟಿಪಿ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟಂದ ಸಂಸ್ಥೆಗಳಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ 2.25 ಹೆಕ್ಟೇರ್‌ನಲ್ಲಿ 16,700 ಕ್ಕೂ ಹೆಚ್ಚು ಜೌಗು ಪ್ರದೇಶಗಳು ಮತ್ತು ಕೆರೆಗಳಿವೆ. ಈ ಜಲಮೂಲಗಳತ್ತ ಗಮನಹರಿಸಬೇಕಿದೆ. ಅವುಗಳನ್ನು ರಕ್ಷಿಸಬೇಕಿದೆ. ಅವುಗಳನ್ನು ಸಂರಕ್ಷಿತ ಜೌಗು ಪ್ರದೇಶಗಳೆಂದು ಘೋಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಗುರುತಿಸದ ಜೌಗು ಪ್ರದೇಶಗಳ ಪಟ್ಟಿಯನ್ನು ಸಿದ್ಧಪಡಿಸಿ ಸಾರ್ವಜನಿಕರ ಮಾಹಿತಿಗಾಗಿ ಸರ್ಕಾರಿ ವೆಬ್‌ಸೈಟ್‌ನಲ್ಲಿ ಅಧಿಕಾರಿಗಳು ಪ್ರಕಟಿಸಬೇಕು.

ಜಲಮೂಲಗಳನ್ನು ಕಲುಷಿತಗೊಳಿಸುವುದರಿಂದ ಉಂಟಾಗುವ ಪರಿಣಾಮಗಳ ಜೊತೆಗೆ ನಿಯಮಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು. ಇಂಗ್ಲಿಷ್ ಮತ್ತು ಕನ್ನಡದಲ್ಲಿ ಮಾಹಿತಿಯನ್ನು ನೀಡಬೇಕು. ಜೌಗು ಪ್ರದೇಶಗಳ ಸಂರಕ್ಷಣೆಗೆ ಕ್ರಿಯಾ ಯೋಜನೆ ರೂಪಿಸಿ 10 ದಿನಗಳಲ್ಲಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT