'ಪುಸ್ತಕ ಪ್ರಪಂಚ' ಸಮಾರಂಭ 
ರಾಜ್ಯ

ಪುಸ್ತಕ ಬಿಡುಗಡೆ: ಸಾವಣ್ಣ ಪ್ರಕಾಶನದಿಂದ 'ಸಿರಿವಂತಿಕೆಗೆ ಸರಳ ಸೂತ್ರಗಳು' ಸೇರಿ 5 ಪುಸ್ತಕ ಲೋಕಾರ್ಪಣೆ

ಫೆಬ್ರವರಿ 11, ಭಾನುವಾರ ಸಾವಣ್ಣ ಪ್ರಕಾಶನದಿಂದ 5 ಪುಸ್ತಕಗಳು ಲೋಕಾರ್ಪಣೆಯಾಗುತ್ತಿವೆ.

ಬೆಂಗಳೂರು: ಫೆಬ್ರವರಿ 11, ಭಾನುವಾರ ಸಾವಣ್ಣ ಪ್ರಕಾಶನದಿಂದ 5 ಪುಸ್ತಕಗಳು ಲೋಕಾರ್ಪಣೆಯಾಗುತ್ತಿವೆ.

ಸಾವಣ್ಣ ಪ್ರಕಾಶನದ (Sawanna Prakashana) ವತಿಯಿಂದ ನಾಳೆ ಐದು ಪ್ರಮುಖ ಪುಸ್ತಕಗಳು ಬಿಡುಗಡೆಯಾಗುತ್ತಿದ್ದು, ಕನ್ನಡ ಪ್ರಭ ಆನ್ ಲೈನ್ ನ ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರ ʼಸಿರಿವಂತಿಕೆಗೆ ಸರಳ ಸೂತ್ರಗಳುʼ ಸೇರಿದಂತೆ ಒಟ್ಟು 5 ಕೃತಿಗಳು ನಾಳೆ ಲೋಕಾರ್ಪಣೆಯಾಗುತ್ತಿದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ನಾಳೆ ಅಂದರೆ ಫೆ.11ರಂದು ಬೆಳಗ್ಗೆ 10.30ಕ್ಕೆ ಬಸವನಗುಡಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನ ವಾಡಿಯಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

'ಪುಸ್ತಕ ಪ್ರಪಂಚ' ಸಮಾರಂಭದಲ್ಲಿ ಸಾವಣ್ಣ ಪ್ರಕಾಶನದ ಈ 5 ಕೃತಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಲೇಖಕರೊಡನೆ ವಿಶೇಷ ಸಂವಾದವನ್ನು‌ ಏಮ್ ಹೈ ಕನ್ಸಲ್ಟಿಂಗ್ ಸಿಇಒ, ಅಂಕಣಕಾರರು, ಸ್ಟಾರ್ಟಪ್ ಮಾರ್ಗದರ್ಶಕರಾದ ಎನ್. ರವಿಶಂಕರ್ ಅವರು ನಡೆಸಿಕೊಡಲಿದ್ದಾರೆ. ರಂಜನೀ ಕೀರ್ತಿ ಅವರು ನಿರೂಪಣೆ ಮಾಡಲಿದ್ದಾರೆ. ಬೆಳಗ್ಗೆ 9:30 ಗಂಟೆಗೆ ಉಪಾಹಾರ ವ್ಯವಸ್ಥೆಯೂ ಇರುತ್ತದೆ.

ಬಿಡುಗಡೆಯಾಗುವ ಪುಸ್ತಕಗಳು
ರಂಗಸ್ವಾಮಿ ಮೂಕನಹಳ್ಳಿ ಅವರ 'ಸಿರಿವಂತಿಕೆಗೆ ಸರಳ ಸೂತ್ರಗಳು'
ಡಾ. ನಾ. ಸೋಮೇಶ್ವರ ಅವರ 'ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು?'
ಜಗದೀಶಶರ್ಮಾ ಸಂಪ ಅವರ (25ನೇ ಪುಸ್ತಕ) 'ಮಹಾಭಾರತ ಅನ್ವೇಷಣೆ'
ಸತೀಶ್ ವೆಂಕಟಸುಬ್ಬು ಅವರ 'ಸೈಬರ್ ಕ್ರೈಂ' ತಡೆಗಟ್ಟುವುದು ಹೇಗೆ? (ಕನ್ನಡ) ಮತ್ತು 'Cyber Crime' (ಇಂಗ್ಲಿಷ್)
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT