ಸಂಗ್ರಹ ಚಿತ್ರ 
ರಾಜ್ಯ

ಬಿಸಿಲ ಝಳಕ್ಕೆ ಜನತೆ ಹೈರಾಣ: ಬೆಂಗಳೂರಿನಲ್ಲಿ ವಾಡಿಕೆಗಿಂತ 2-3 ಪಟ್ಟು ಹೆಚ್ಚಿನ ತಾಪಮಾನ ದಾಖಲು!

ರಾಜ್ಯದಾದ್ಯಂತ ಈ ಬಾರಿ ಕಾಡಿದ ತೀವ್ರ ಮಳೆ ಕೊರತೆಯ ಬೆನ್ನಲ್ಲೇ ಬೇಸಿಗೆಯೂ ಜನಜೀವನದ ಮೇಲೆ ಬರೆ ಎಳೆಯಲು ಸಿದ್ಧವಾದಂತಿದೆ. ಫೆಬ್ರವರಿ ಆರಂಭವಾಗಿ ಇನ್ನೂ ವಾರ ಕಳೆಯುತ್ತಿರುವಾಗಲೇ, ಕಳೆದೆರಡು ದಿನಗಳಿಂದ ರಾಜ್ಯದಾದ್ಯಂತ ಬಿಸಿಲ ಅಬ್ಬರ ಜೋರಾಗಿದೆ.

ಬೆಂಗಳೂರು: ರಾಜ್ಯದಾದ್ಯಂತ ಈ ಬಾರಿ ಕಾಡಿದ ತೀವ್ರ ಮಳೆ ಕೊರತೆಯ ಬೆನ್ನಲ್ಲೇ ಬೇಸಿಗೆಯೂ ಜನಜೀವನದ ಮೇಲೆ ಬರೆ ಎಳೆಯಲು ಸಿದ್ಧವಾದಂತಿದೆ. ಫೆಬ್ರವರಿ ಆರಂಭವಾಗಿ ಇನ್ನೂ ವಾರ ಕಳೆಯುತ್ತಿರುವಾಗಲೇ, ಕಳೆದೆರಡು ದಿನಗಳಿಂದ ರಾಜ್ಯದಾದ್ಯಂತ ಬಿಸಿಲ ಅಬ್ಬರ ಜೋರಾಗಿದೆ.

ರಾಜ್ಯ ರಾಜಧಾನಿ ಬೆಂಗಲೂರಿನಲ್ಲಿ ತಾಪಮಾನ ವಾಡಿಕೆಗಿಂತ 2-3 ಪಟ್ಟು ಹೆಚ್ಚಾಗಿದ್ದು, ಇತ್ತೀಚಿನ ವರ್ಷಗಳಲ್ಲೀ ಈ ಅವಧಿಯಲ್ಲಿ ಇದು ಅತೀ ಹೆಚ್ಚಿನ ತಾಪಮಾನವಾಗಿದೆ ಎಂದು ಹೇಳಲಾಗುತ್ತಿದೆ. ಮಾರ್ಚ್, ಏಪ್ರಿಲ್ ನಲ್ಲಿ ಈ ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಮುಂದಿನ 2 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ತಾಪಮಾನ ಏರಿಕೆಯಾಗಲಿದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಬಿಸಿಲು ಹೆಚ್ಚಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗುರುವಾರ 34.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಶುಕ್ರವಾರ ಗರಿಷ್ಠ ತಾಪಮಾನ 33.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಕಲಬುರಗಿಯಲ್ಲಿ ಶುಕ್ರವಾರ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಬೇಸಿಗೆ ಈಗಲೇ ಆರಂಭವಾಗಿದೆ. ಕಳೆದ ಮೂರು ದಿನಗಳಲ್ಲಿ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಿದೆ. ಬೆಳಗಿನ ತಾಪಮಾನವು 13.8 ರಿಂದ 17 ಡಿಗ್ರಿ ಸೆಲ್ಸಿಯಸ್‌ನಷ್ಟಿರುವುದರಿಂದ ಜನರು ಬಿಸಿಲ ಬೇಗೆಗೆ ತತ್ತರಿಸುತ್ತಿದ್ದಾರೆ. ಅಲ್ಪಾವಧಿಯಲ್ಲಿ ಈ ತಾಪಮಾನ 33-34 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆವ ಐಎಂಡಿ ವಿಜ್ಞಾನಿ ಎ ಪ್ರಸಾದ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮುಂಜಾನೆ ತಾಪಮಾನವು 17 ಡಿಗ್ರಿ ಸೆಲ್ಸಿಯಸ್ ನಷ್ಟಿರುತ್ತದೆ. ಬೆಳಿಗ್ಗೆ 9-10 ಗಂಟೆ ವೇಳೆದೆ ಈ ತಾಪಮಾನ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಮುಂಬರುವ ದಿನಗಳಲ್ಲಿ ತಾಪಮಾನ ಕಡಿಮೆಯಾಗುವ ಸಾಧ್ಯತೆಗಳೂ ಇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT