ಪ್ರತ್ಯಕ್ಷ ದೃಶ್ಯ 
ರಾಜ್ಯ

ಚಿಕ್ಕಬಳ್ಳಾಪುರ: ಗೌರಿಬಿದನೂರು ಖಾಸಗಿ ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ಸಾವು

ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. 

ಕಲ್ಲಂಕರಾಯನಕುಂಟೆ ಗ್ರಾಮದಲ್ಲಿನ ಶಾರದಾ ಶಾಲಾ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದೆ. ಹೀಗಾಗಿ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದ್ದು, ಘಟನೆಯಲ್ಲಿ ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂಬುವರು ಮೃತಪಟ್ಟಿದ್ದಾರೆ. ಇನ್ನು 18ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗ ದಾಖಲು ಮಾಡಲಾಗಿದೆ.

ಗಾಯಾಳುಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು, ಇಬ್ಬರು ಪೋಷಕರು ಹಾಗೂ ಇಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೌರಿಬಿದನೂರು ನಗರದ ಅರುಣಾ ಆಸ್ಪತ್ರೆಯಲ್ಲಿ ಹತ್ತು ಮಂದಿಗೆ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂಟು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT