ಸಂಗ್ರಹ ಚಿತ್ರ 
ರಾಜ್ಯ

ಕೆರಗೋಡು ಹನುಮ ಧ್ಜಜ ವಿವಾದ: ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ

ಕೆರಗೋಡಿ ಹನುಮ ಧ್ಜಜ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ರ‍್ಯಾಲಿಗಷ್ಟೇ ಮಂಡ್ಯ ಬಂದ್‌ ಸೀಮಿತವಾಗಿತ್ತು. ಆದರೆ. ಕೆರೆಗೋಡು ಗ್ರಾಮ ಬಂದ್‌ ಸಂಪೂರ್ಣ ಯಶಸ್ವಿಯಾಗಿತ್ತು...

ಮಂಡ್ಯ: ಕೆರಗೋಡಿ ಹನುಮ ಧ್ಜಜ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ರ‍್ಯಾಲಿಗಷ್ಟೇ ಮಂಡ್ಯ ಬಂದ್‌ ಸೀಮಿತವಾಗಿತ್ತು. ಆದರೆ. ಕೆರೆಗೋಡು ಗ್ರಾಮ ಬಂದ್‌ ಸಂಪೂರ್ಣ ಯಶಸ್ವಿಯಾಗಿತ್ತು. ಬಂದ್‌ ಸಮಯದಲ್ಲಿ ಕೆರಗೋಡು ಗ್ರಾಮದಿಂದ ಮಂಡ್ಯ ನಗರದವರೆಗೆ ಬೈಕ್‌ ರ್ಯಾಲಿ ನಡೆಯಿತು.

ಹಿಂದೂಪರ ಸಂಘಟನೆಗಳ ಕಾರ‍್ಯಕರ್ತರು ಬಂದ್‌ಗೆ ಸಹಕರಿಸುವಂತೆ ಸಾರ್ವಜನಿಕರು, ವರ್ತಕರಿಗೆ ಮನವಿ ಮಾಡಿದ್ದರು. ಆದರೆ, ಬಂದ್‌ಗೆ ವರ್ತಕರು ಅಸಹಕಾರ ವ್ಯಕ್ತಪಡಿಸಿದರು.

ಶಾಲಾ-ಕಾಲೇಜುಗಳು, ಚಿತ್ರಮಂದಿರಗಳು, ಅಂಗಡಿ- ಮುಂಗಟ್ಟುಗಳು ತೆರೆದಿದ್ದವು. ಜಿಲ್ಲಾ ವಾಣಿಜ್ಯ ಮಂಡಳಿಯು ಬಂದ್‌ ಬೆಂಬಲಿಸುವುದಿಲ್ಲ ಎಂದು ಹೇಳಿದ್ದ ಕಾರಣ ವರ್ತಕರು ಅಂಗಡಿಗಳನ್ನು ಬಂದ್‌ ಮಾಡದೆ ವ್ಯಾಪಾರ-ವಹಿವಾಟು ನಡೆಸಿದರು. ಆಟೋ, ಕಾರುಗಳು, ಬಸ್ಸುಗಳ ಸಂಚಾರ ಎಂದಿನಂತಿತ್ತು.

ಶ್ರೀರಾಮ ಭಜನಾ ಮಂಡಳಿ, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ನ ನೂರಾರು ಮಂದಿ ಕಾರ‍್ಯಕರ್ತರು ಮಂಡ್ಯ ತಾಲೂಕು ಕೆರೆಗೋಡು ಗ್ರಾಮದಿಂದ ಮಂಡ್ಯ ನಗರದವರೆಗೆ ಬೃಹತ್‌ ಬೈಕ್‌ ರ‍್ಯಾಲಿ ನಡೆಸಿದರು.

ಕೆರಗೋಡಿನ ಶ್ರೀಆಂಜನೇಯಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿ ಹುಲಿವಾನ, ಹೊನಗಾನಹಳ್ಳಿ, ಕೊಮ್ಮೇರಹಳ್ಳಿ, ಸಾತನೂರು, ಚಿಕ್ಕಮಂಡ್ಯ, ಕಾಳಿಕಾಂಭ ದೇವಾಲಯದ ಮಾರ್ಗವಾಗಿ ಮಂಡ್ಯ ನಗರದ ರೈಲು ನಿಲ್ದಾಣ ಬಳಿಯ ಶ್ರೀಆಂಜನೇಯಸ್ವಾಮಿ ದೇವಾಲಯವರೆಗೆ ಬೈಕ್‌ ರ‍್ಯಾಲಿ ಆಗಮಿಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಜೈ ಶ್ರೀರಾಮ್ ಹಾಗೂ ಜೈ ಹನುಮಾನ್ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ರಾಮ ಭಜನೆಗಳ ಗೀತೆಗಳಿಗೆ ನೃತ್ಯವನ್ನೂ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT