ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ 
ರಾಜ್ಯ

ಗೋವುಗಳೊಂದಿಗೆ ಪ್ರತಿಭಟನೆ: 9 ಮಂದಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ 6 ಗೋವುಗಳನ್ನು ಫ್ರೀಡಂ ಪಾರ್ಕ್‌ಗೆ ತಂದಿದ್ದ ಹಿನ್ನೆಲೆಯಲ್ಲಿ 9 ಮಂದಿ ಬಿಜೆಪಿ ನಾಯಕರ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ 6 ಗೋವುಗಳನ್ನು ಫ್ರೀಡಂ ಪಾರ್ಕ್‌ಗೆ ತಂದಿದ್ದ ಹಿನ್ನೆಲೆಯಲ್ಲಿ 9 ಮಂದಿ ಬಿಜೆಪಿ ನಾಯಕರ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರುದ್ಧ ಮಂಗಳವಾರ ಫ್ರೀಡಂ ಪಾರ್ಕ್'ನಲ್ಲಿ  ಪ್ರತಿಭಟನೆ ನಡೆಸಿದರು. ಈ ವೇಳೆ ತಮ್ಮೊಂದಿಗೆ ಗೋವುಗಳನ್ನೂ ಕರೆತಂದಿದ್ದರು.

ಪ್ರತಿಭಟನೆ ತಡೆಯಲು ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ಗಳಲ್ಲಿ ಹತ್ತಿಸಲು ಮುಂದಾಗಿದ್ದರು. ಈ ವೇಳೆ ಕೆಲ ನಾಯಕರು. ಗೋವುಗಳನ್ನೂ ಕೂಡ ತಮ್ಮೊಂದಿಗೆ ಬಸ್ ಗಳಲ್ಲಿ ಹತ್ತಿಸಲು ಮುಂದಾಗಿದ್ದರು.

ಬಸ್ ಗಳಲ್ಲಿ ಸಣ್ಣ ಬಾಗಿಲುಗಳಿರುವುದರಿಂದ ಅವುಗಳನ್ನು ಬಸ್ ಗಳ ಒಳಗೆ ಹತ್ತಿಸಲು ಸಾಧ್ಯವಾಗುತ್ತಿರಲಿಲ್ಲ. ಗೋವುಗಳ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಯಿತು. ಪ್ರತಿಭಟನಾ ಸ್ಥಳದಲ್ಲಿ ದೊಡ್ಡ ದೊಡ್ಡ ಸ್ಪೀಕರ್ ಗಳಲ್ಲಿ ಬರುತ್ತಿದ್ದ ಧ್ವನಿಯಿಂದಾಗಿ ಗೋವುಗಳು ಭೀತಿಗೊಳಗಾಗಿ ವಿವಿಧ ದಿಕ್ಕುಗಳಲ್ಲಿ ಓಡಲು ಪ್ರಯತ್ನಿಸುತ್ತಿದ್ದವು ಎಂದು ಪೊಲೀಸರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆ ವೇಳೆ ಗೋವುಗಳಿಗೆ ಹಿಂಸೆ ನೀಡಿದವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಶಾಂತ್ ಅವರು ದೂರು ದಾಖಲಿಸಿದ್ದಾರೆ.

ಪಿ ರಾಜೀವ್, ಪಾಟೀಲ್ ನಡಹಳ್ಳಿ, ಹರೀಶ್, ಸಪ್ತಗಿರಿಗೌಡ ಸೇರಿದಂತೆ ಐವರ ವಿರುದ್ಧ ದೂರು ದಾಖಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದರೂ, ಪ್ರತಿಭಟನೆಗೆ ಪ್ರಾಣಿಗಳನ್ನು ಕರೆತರುವುದು ಕಾನೂನುಬಾಹಿರವಾಗಿದೆ. ಆರು ಹಸುಗಳನ್ನು ಪ್ರತಿಭಟನಾಕಾರರು ಅಮಾನವೀಯವಾಗಿ ನಡೆಸಿಕೊಂಡರು. ಈ ಜಾನುವಾರುಗಳ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದರೂ, ಇನ್ನು ಮುಂದೆ ಯಾವುದೇ ಪ್ರತಿಭಟನೆಗೆ ಪ್ರಾಣಿಗಳನ್ನು ಕರೆತರದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'INS Vikrant ಪಾಕಿಗಳ ನಿದ್ರೆಗೆಡಿಸಿತ್ತು.. ಬ್ರಹ್ಮೋಸ್, ಆಕಾಶ್‌ ಕ್ಷಿಪಣಿಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಬಂದಿದೆ': ಆಪರೇಷನ್ ಸಿಂದೂರ ಕುರಿತು ಪ್ರಧಾನಿ ಮೋದಿ

Bihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ, ಆರ್ ಜೆಡಿಯ 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

'96 ಲಕ್ಷ ನಕಲಿ ಮತದಾರರ ಸೇರ್ಪಡೆ': ಚುನಾವಣಾ ಆಯೋಗದ ವಿರುದ್ಧ ರಾಜ್ ಠಾಕ್ರೆ ಕಿಡಿ

ಶಿಮ್ಲಾದಲ್ಲಿ ಪಂಚಾಯತ್ ಮುಖ್ಯಸ್ಥನಿಂದ ಬಾಲಕಿ ಮೇಲೆ ಅತ್ಯಾಚಾರ!

'ಸಂಬಳ ನೀಡದೇ ಕಿರುಕುಳ': ಡೆತ್‌ ನೋಟ್‌ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ, ಭವೀಶ್ ಅಗರ್ವಾಲ್ ವಿರುದ್ಧ ಪ್ರಕರಣ!

SCROLL FOR NEXT