ಕಾಡಾನೆ ದಾಳಿ (ಸಂಗ್ರಹ ಚಿತ್ರ) 
ರಾಜ್ಯ

ಕನಕಪುರ: ಕಾಡಾನೆದಾಳಿಗೆ ರೈತ ಸಾವು

ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಕನಕಪುರದಲ್ಲಿ ಆನೆದಾಳಿಯಲ್ಲಿ ರೈತ ಮೃತಪಟ್ಟಿರುವ ಘಟನೆ ಭಾನುವಾರ ವರದಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಕನಕಪುರದಲ್ಲಿ ಆನೆದಾಳಿಯಲ್ಲಿ ರೈತ ಮೃತಪಟ್ಟಿರುವ ಘಟನೆ ಭಾನುವಾರ ವರದಿಯಾಗಿದೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಈ ಘಟನೆ ನಡೆದಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮುಗ್ಗೂರು ಗ್ರಾಮದ ಬಳಿ ಕಾಡಾನೆ ದಾಳಿ ಮಾಡಿದೆ. ಕನಕಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾಗಿದ್ದಾರೆ. ರಾಜು (67) ಮೃತ ದುರ್ದೈವಿ.

ರಾಜು ಅವರು ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಆನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅಸ್ವಸ್ಥರಾಗಿದ್ದ ರೈತ ರಾಜು ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕನಕಪುರ ತಾಲೂಕಿನಲ್ಲಿ ಕಾಡಾನೆ ದಾಳಿ ಹೆಚ್ಚಾಗಿದೆ.

ಅರಣ್ಯ ವಾಚರ್ ಗಳನ್ನೇ ಅಟ್ಟಾಡಿಸಿದ್ದ ಆನೆ
ಇತ್ತೀಚೆಗೆ ಕೊಡಗಿನ ಕಾಜೂರು ಅರಣ್ಯ ಪ್ರದೇಶದಿಂದ ಬಂದ ಮದವೇರಿದ ಕಾಡಾನೆಯು ದಾಳಿ ಮಾಡಿದೆ. ಪ್ರಾಣಪಾಯದಿಂದ ಆರ್‌ಆರ್‌ಟಿ ಸಿಬ್ಬಂದಿ (RRT), ಅರಣ್ಯ ರಕ್ಷಕ ಪಾರಾಗಿದ್ದಾರೆ. ಬೆಳಗ್ಗೆ ಕಾಡಾನೆಯು ಕೋವರ್ ಕೊಲ್ಲಿ ಟಾಟಾ ಎಸ್ಟೇಟ್‌ನಲ್ಲಿತ್ತು. ಈ ಮಾಹಿತಿ ತಿಳಿದು ಸ್ಥಳಕ್ಕೆ ಆರ್‌ಆರ್‌ಟಿ ಮತ್ತು ಅರಣ್ಯ ಸಿಬ್ಬಂದಿ ತೆರಳಿದ್ದರು. ಈ ವೇಳೆ ಸಿಬ್ಬಂದಿಯನ್ನು ಕಂಡು ಆನೆಯು ದಾಳಿ ಮಾಡಿ, ಬೈಕ್ ಜಖಂಗೊಳಿಸಿದೆ. ನಂತರ ಎಸ್ಟೇಟ್‌ನಿಂದ ಅರಣ್ಯಕ್ಕೆ ವಾಪಸ್‌ ತೆರಳಿದೆ. ಅದೃಷ್ಟವಶಾತ್‌ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT