ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: RFO ವರ್ಗಾವಣೆಗಾಗಿ ಗುಬ್ಬಿ ಶಾಸಕರ ನಕಲಿ ಲೆಟರ್ ಹೆಡ್ ಮತ್ತು ಸಿಗ್ನೇಚರ್!

ಬೆಂಗಳೂರಿನಿಂದ ತುಮಕೂರಿಗೆ ರೇಂಜ್ ಫಾರೆಸ್ಟ್ ಆಫೀಸರ್ (ಆರ್‌ಎಫ್‌ಒ) ವರ್ಗಾವಣೆ ಪಡೆಯಲು ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ಅವರ ಲೆಟರ್‌ಹೆಡ್ ಮತ್ತು ಸಹಿ ನಕಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಿಂದ ತುಮಕೂರಿಗೆ ರೇಂಜ್ ಫಾರೆಸ್ಟ್ ಆಫೀಸರ್ (ಆರ್‌ಎಫ್‌ಒ) ವರ್ಗಾವಣೆ ಪಡೆಯಲು ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ಅವರ ಲೆಟರ್‌ಹೆಡ್ ಮತ್ತು ಸಹಿ ನಕಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ವಿಕಾಸಸೌಧದಲ್ಲಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕಚೇರಿಯಲ್ಲಿರುವ ಟಪಾಲ್ ವಿಭಾಗಕ್ಕೆ ಬಂದ ಇಬ್ಬರು ಯುವಕರು ಗುಬ್ಬಿ ಶಾಸಕರ ಪತ್ರವನ್ನು ತಮ್ಮ ಲೆಟರ್‌ಹೆಡ್‌ನಲ್ಲಿ ನೀಡಿದ್ದು, ಆರ್‌ಎಫ್‌ಒ ವರ್ಗಾವಣೆಗೆ ಶಿಫಾರಸು ಮಾಡಲಾಗಿದೆ ಎಂದಿದ್ದಾರೆ.

ಅನುಮಾನಗೊಂಡು ಟಪಾಲ್ ವಿಭಾಗದ ಸಿಬ್ಬಂದಿ ಅವರನ್ನು ವಿಚಾರಿಸಿದಾಗ ಇಬ್ಬರೂ ಓಡಿ ಹೋಗಿದ್ದಾರೆ. ಬೆಂಗಳೂರಿನ ಕಾಡುಗೋಡಿಯಲ್ಲಿರುವ ಅರಣ್ಯ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್‌ಎಫ್‌ಒ ಅವರನ್ನು ತುಮಕೂರು ಜಿಲ್ಲೆಯ ಪಾವಗಡ ರೇಂಜ್‌ಗೆ ವರ್ಗಾವಣೆ ಮಾಡುವಂತೆ ಪತ್ರದಲ್ಲಿ ಅರಣ್ಯ ಸಚಿವರನ್ನು ಕೋರಲಾಗಿತ್ತು.

ಸಚಿವರ ಆಪ್ತ ಸಹಾಯಕರು ವಿಧಾನಸೌಧ ಪೊಲೀಸರಿಗೆ ದೂರು ಸಲ್ಲಿಸಿದ್ದು, ಲೆಟರ್‌ಹೆಡ್‌ನಲ್ಲಿ ಹೆಸರು ನಮೂದಿಸಿರುವ ಇಬ್ಬರು ಅಪರಿಚಿತ ಆರೋಪಿಗಳು ಮತ್ತು ಆರ್‌ಎಫ್‌ಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಪ್ರಕರಣದ ಎರಡನೇ ಆರೋಪಿ ದೀಪಾಂಜಲಿ ನಗರದ ನಿವಾಸಿ ನಂದೀಶ್ (24) ನಿರೀಕ್ಷಣಾ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು.

ತಾನು ನಿರಪರಾಧಿ ಎಂದು ಹೇಳಿರುವ ನಂದೀಶ್, ಮೊದಲ ಆರೋಪಿಯ ಸೂಚನೆ ಮೇರೆಗೆ ಅರಣ್ಯ ಸಚಿವರ ಕಚೇರಿಯ ಟಪಾಲ್ ವಿಭಾಗಕ್ಕೆ ಹೋಗಿದ್ದೆ, ಆದರೆ ಶಾಸಕರ ಸಹಿಯನ್ನು ನಕಲಿ ಮಾಡಲಾಗಿದೆ  ಎಂಬ ವಿಷಯ ತಿಳಿಯದೆ ಹೋಗಿದ್ದೆ.  ಸಚಿವರ ಕಚೇರಿ ಸಿಬ್ಬಂದಿ ಹಿಡಿಯಲು ಮುಂದಾದಾಗ ಓಡಿ ಹೋಗಿದ್ದಾಗಿ ತಿಳಿಸಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್ ಜಾಮೀನು ಅರ್ಜಿಗೆ ವಿರೋಧ ವ್ಯಕ್ತ ಪಡಿಸಿದರು, ಅರ್ಜಿದಾರರರು ಪ್ರಕರಣದಲ್ಲಿ ಶಾಮೀಲಾಗಿರುವುದಕ್ಕೆ ಪ್ರಾಥಮಿಕ ಸಾಕ್ಷಿಗಳಿವೆ ಎಂದು ಪ್ರತಿಪಾದಿಸಿದರು. ಮೂರನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್  ಕೋರ್ಟ್ ಜಡ್ಜ್ ಎ.ಸಿ ನಿಶಾರಾಣಿ  ಫೆಬ್ರವರಿ 8 ರಂದು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT