ಶಿಕ್ಷಕಿ ಅಮಾನತು 
ರಾಜ್ಯ

ಶ್ರೀರಾಮನಿಗೆ ಅವಹೇಳನ: ಮಂಗಳೂರಿನ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.

ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. 

ಹಿಂದೂಗಳ ಅಸ್ಮಿತೆ ಶ್ರೀರಾಮನ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ ಸದಸ್ಯರು, ತನಿಖೆ ಪೂರ್ಣಗೊಳ್ಳುವವರೆಗೂ ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಪೋಷಕರು, ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಈ ವೇಳೆ ಪೊಲೀಸರು ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ತಡೆದಿದ್ದರು.

ಆಡಳಿತ ಮಂಡಳಿಯ ಸದಸ್ಯರು ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್​ನಲ್ಲಿ ಶಿಕ್ಷಕಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಿದರು. ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಫೆಬ್ರವರಿ 8ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡಿದ್ದ ಶಿಕ್ಷಕಿ ಸಿಸ್ಟರ್ ಪ್ರಭಾ ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ನಂತರ ಪೋಷಕರು ಮತ್ತು ಹಿಂದೂ ಕಾರ್ಯಕರ್ತರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರಹಾಕಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT