ಟ್ರಾಫಿಕ್ ಉಲ್ಲಂಘನೆ 
ರಾಜ್ಯ

Traffic violations: 300 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ, 3 ಲಕ್ಷ ರೂ. ದಂಡ; ಸ್ಕೂಟರ್ ವ್ಯಾಲ್ಯು 20 ಸಾವಿರ ರೂ.!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಲ್ಲೋರ್ವ ವ್ಯಕ್ತಿಯ ಸ್ಕೂಟರ್ ಮೇಲೆ 300ಕ್ಕೂ ಅಧಿಕ ಬಾರಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿದ್ದು, 3 ಲಕ್ಷ ರೂ. ಗೂ ಅಧಿಕ ದಂಡ ಬಾಕಿ ಉಳಿದಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಲ್ಲೋರ್ವ ವ್ಯಕ್ತಿಯ ಸ್ಕೂಟರ್ ಮೇಲೆ 300ಕ್ಕೂ ಅಧಿಕ ಬಾರಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿದ್ದು, 3 ಲಕ್ಷ ರೂ. ಗೂ ಅಧಿಕ ದಂಡ ಬಾಕಿ ಉಳಿದಿದೆ.

ಹೌದು.. ವೆಂಕಟ್ರಾಮನ್ ಎಂಬಾತನ ವಾಹನದ ಮೇಲೆ ಬರೋಬ್ಬರಿ 300ಕ್ಕೂ ಹೆಚ್ಚು ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಈ ವಾಹನ ಮಾರುಕಟ್ಟೆ ವ್ಯಾಲ್ಯೂನೇ 20 ಸಾವಿರ ರೂ ಇದ್ದು, ಆ ಗಾಡಿಯ ಮೇಲಿನ ದಂಡ ಮಾತ್ರ 3 ಲಕ್ಷ ರೂಗೂ ಅಧಿಕ ದಂಡ ಇದೆ ಎಂದು ತಿಳಿದುಬಂದಿದೆ.

ಸಂಚಾರಿ ಆಯುಕ್ತ ಅನುಚೇತ್ ಅವರು ಈ ಹಿಂದೆ 50 ಸಾವಿರದವರೆಗೆ ದಂಡವಿದ್ದಲ್ಲಿ ಅದನ್ನು ಮನೆಗೆ ಹೋಗಿ ವಸೂಲಿ ಮಾಡಿಕೊಳ್ಳಿ ಎಂದು ನಗರ ಸಂಚಾರ ಪೊಲೀಸರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವೆಂಕಟರಾಮನ್ ಎಂಬಾತ ವಾಹನ ತಪಾಸಣೆ ಮಾಡಿದ್ದಾರೆ. ಈ ವೇಳೆ ಸಂಚಾರ ನಿಯಮ ಉಲ್ಲಂಘನೆ ಮಾಡಿರುವವರಲ್ಲಿ ಈತ ನಂಬರ್ ಒನ್‌ ಎನಿಸಿಕೊಂಡಿದ್ದಾನೆ.

ಈತನ ವಾಹನದ ಮೇಲೆ 300ಕ್ಕೂ ಹೆಚ್ಚು ಕೇಸ್‌ಗಳಿವೆ. ಒನ್ ವೇ ಸಂಚಾರ, ಸಿಗ್ನಲ್ ಜಂಪ್, ಗಾಡಿ ಓಡಿಸುತ್ತಾ ‌ಮೊಬೈಲ್‌ ಬಳಕೆ, ಫುಟ್ ಪಾಥ್‌ ಮೇಲೆ ಸಂಚಾರ ಸೇರಿ 300ಕ್ಕೂ ಅಧಿಕ ಪ್ರಕರಣಗಳು ಬಾಕಿ ಇದೆ. ಎಸ್‌.ಆರ್ ನಗರ , ವಿಲ್ಸನ್ ಗಾರ್ಡನ್ ಸೇರಿದಂತೆ ಹಲವೆಡೆ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT