ರಾಜ್ಯ

ಟೆನಿಸ್ ಆಟಗಾರ ರೋಹನ್ ಬೋಪಣ್ಣಗೆ ಸಿಎಂ ಸಿದ್ದರಾಮಯ್ಯ ಸನ್ಮಾನ: 50 ಲಕ್ಷ ರೂ. ಬಹುಮಾನ ಘೋಷಣೆ

Sumana Upadhyaya

ಬೆಂಗಳೂರು: ಇತ್ತೀಚೆಗೆ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿ ಸನ್ಮಾನಿಸಿ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.

ಕಳೆದ ಜನವರಿ 27ರಂದು ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್​ ಟೆನಿಸ್​ ಟೂರ್ನಿಯ ಪುರುಷರ ಡಬಲ್ಸ್​ ಫೈನಲ್​(Australian Open Men’s Doubles Final) ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಅವರ ಜತೆಗಾರ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌ (Matthew Ebden) ಸೇರಿಕೊಂಡು ಇಟಲಿಯ ಸಿಮೋನ್​ ಬೊಲೆಲ್ಲಿ-ಆ್ಯಂಡ್ರಿಯಾ ವಸಸ್ಸೊರಿ ವಿರುದ್ಧ 7-6(7-0), 7-5 ನೇರ ಸೆಟ್​ಗಳಿಂದ ಗೆಲುವು ಸಾಧಿಸಿದರು.

SCROLL FOR NEXT