ಸಂಗ್ರಹ ಚಿತ್ರ 
ರಾಜ್ಯ

ಕಾವೇರಿ ನದಿ ನೀರು ವಿವಾದ: ರಾಜ್ಯಕ್ಕೆ ತಪ್ಪದ ಸಂಕಷ್ಟ, ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂಆರ್​ಸಿ ಶಿಫಾರಸು

ಮಳೆ ಕೊರತೆ ಹಾಗೂ ಬರದಿಂದ ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಂಬಂತೆ ತಮಿಳುನಾಡಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.

ನವದೆಹಲಿ/ಬೆಂಗಳೂರು: ಮಳೆ ಕೊರತೆ ಹಾಗೂ ಬರದಿಂದ ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಂಬಂತೆ ತಮಿಳುನಾಡಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.

ದೆಹಲಿಯಲ್ಲಿ ಸೋಮವಾರ ಸಮಿತಿಯ ಸಭೆ ನಡೆಯಿತು. 7.61 ಟಿಎಂಸಿ ಬಾಕಿ ಜೊತೆಗೆ ಫೆಬ್ರವರಿಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕೆಂದು ತಮಿಳುನಾಡು ಸಭೆಯಲ್ಲಿ ಒತ್ತಾಯಿಸಿತು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, 2023ರ ಜೂನ್ 1 ರಿಂದ 2024ರ ಫೆಬ್ರವರಿ 9ರವರೆಗೆ ಕರ್ನಾಟಕ ಕಾವೇರಿ ಕೊಳ್ಳದ 4 ಜಲಾಶಗಳಲ್ಲಿ 52.43ರಷ್ಟು ಒಳಹರಿವಿನ ಕೊರತೆಯಿದೆ. ಜೊತೆಗೆ ರಾಜ್ಯದಲ್ಲಿ ತೀವ್ರ ಬರವಿದೆ. ಹೀಗಾಗಿ, ನೀರು ಬಿಡುಗಡೆ ಸಾಧ್ಯವಿಲ್ಲ. ಸಂಕಷ್ಟ ಸೂತ್ರವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೆಂದು ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ಸಮಿತಿ, ನ್ಯಾಯಾಧೀಕರಣದ ಸೂಚನೆಯಂತೆ ಫೆಬ್ರವರಿ ಮತ್ತು ಮಾರ್ಚ ನಲ್ಲಿ ತಮಿಳುನಾಡಿಗೆ ತಲಾ 2.5 (ಒಟ್ಟು 5 ಟಿಎಂಸಿ) ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತು. ಸಮಿತಿಯ ಈ ಶಿಫಾರಸ್ಸನ್ನು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಮುಂದೆ ಪ್ರಶ್ನಿಸಲು ಕರ್ನಾಟಕ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT