ಸಂಗ್ರಹ ಚಿತ್ರ 
ರಾಜ್ಯ

ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ: ಬಿಬಿಎಂಪಿಗೆ ಬಿಜೆಪಿ ಆಗ್ರಹ

ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ ಎಂದು ಬಿಬಿಎಂಪಿಗೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.

ಬೆಂಗಳೂರು: ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ ಎಂದು ಬಿಬಿಎಂಪಿಗೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.

ಸೋಮವಾರ ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಎಸ್.ಆರ್.ವಿಶ್ವನಾಥ್, ಮುನಿರಾಜು, ಸಿ.ಕೆ.ರಾಮಮೂರ್ತಿ ಸೇರಿದಂತೆ ಇತರ ಮುಖಂಡರ ನೇತೃತ್ವದ ನಿಯೋಗವು ಬಿಬಿಎಂಪಿ ಆಯುಕ್ತರಿಗೆ ಈ ಸಂಬಂಧ ದೂರು ನೀಡಿತು.

ಪರಿಷ್ಕೃತ ತೆರಿಗೆ ಮತ್ತು ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡುವುದನ್ನು ಪಾಲಿಕೆ ನಿಲ್ಲಿಸಬೇಕು. ಸ್ವಯಂ ಆಸ್ತಿ ತೆರಿಗೆ ಘೋಷಣೆಯಲ್ಲಿ ದೋಷಪೂರಿತವಾಗಿರುವ ಕಟ್ಟಡಗಳಿಗೆ ದುಪ್ಪಟ್ಟು ದಂಡ, ಬಡ್ಡಿ ಮತ್ತು ಕಾನೂನು ಬಾಹಿರವಾಗಿ ಕಂದಾಯ ವಸೂಲಿ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸ್ವಯಂ ಘೋಷಿತ ತೆರಿಗೆ ಪದ್ಧತಿಯಲ್ಲಿ ಬಿಬಿಎಂಪಿ ಕಾಯ್ದೆಯನ್ವಯ ಐದು ವರ್ಷದಲ್ಲಿ ಹಿಂದಿನ ಬಾಕಿಯ ಹೆಸರಲ್ಲಿ ದಂಡ ಮತ್ತು ಬಡ್ಡಿ ವಸೂಲಿ ಮಾಡುವ ಅಧಿಕಾರ ಇಲ್ಲ. ಆದರೆ, ಕಾಯ್ದೆ ವಿರುದ್ಧವಾಗಿ ಪಾಲಿಕೆ ಕ್ರಮ ಜರುಗಿಸುತ್ತಿದೆ. ನಗರದಲ್ಲಿ ಕಳೆದ ಒಂಬತ್ತು ತಿಂಗಳಿನಿಂದ ಯಾವುದೇ ಅಭಿವೃದ್ಧಿ ಯೋಜನೆಯನ್ನು ಕೈಗೊಳ್ಳಲು ವಿಫಲವಾಗಿರುವ ಸರ್ಕಾರ ಇದೀಗ ನಗರದ ನಾಗರೀಕರನ್ನು ಸುಲಿಗೆ ಮಾಡಿ ಸಂಪನ್ಮೂಲ ಕ್ರೋಢೀಕರಣ ಮಾಡಲು ಮುಂದಾಗಿದೆ ಎಂದು ಕಿಡಿಕಾರಿದೆ.

'ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿದ ಬಿಜೆಪಿ ಶಾಸಕರ ನಿಯೋಗ, ಬಾಕಿ ಇರುವ ತೆರಿಗೆಗಳ ಮೇಲೆ ದಂಡ ವಿಧಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ನಗರದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಅವರು ಹೇಳಿದ್ದಾರೆ.

ಸ್ವ-ಆಸ್ತಿ ತೆರಿಗೆ ಘೋಷಣೆಯಲ್ಲಿ ದೋಷವಿರುವ ಕಟ್ಟಡಗಳಿಗೆ ಎರಡು ಬಾರಿ ದಂಡ ಮತ್ತು ಬಡ್ಡಿ ವಿಧಿಸಲಾಗುತ್ತಿದೆ. ತೆರಿಗೆ ಪರಿಷ್ಕರಣೆ ನೆಪದಲ್ಲಿ ಸುಮಾರು 76,000 ಮನೆಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಬಳಿಕ ಹಲವು  ಕಟ್ಟಡಗಳಿಗೆ ಬೀಗ ಹಾಕಿದ್ದಾರೆ. ನೀಡಲು ಪ್ರಾರಂಭಿಸುತ್ತಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT