ಬಾವಿ ತೋಡುತ್ತಿದ್ದ ಮಹಿಳೆ 
ರಾಜ್ಯ

ಶಿರಸಿ: ಗೌರಿ ನಾಯ್ಕ ಕೆಲಸಕ್ಕೆ ಅಡ್ಡಿ; ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ!

ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ.

ಶಿರಸಿ: ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ. ಮಾಹಿತಿ ಪ್ರಕಾರ ಬಾವಿ ತೋಡಲು ಯಾವುದೇ ಪರವಾನಗಿ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾದ ಅಧಿಕಾರಿಗಳು, ಬಾವಿ ತೋಡುತ್ತಿದ್ದ ಗೌರಿಯನ್ನು ತಡೆದಿದ್ದಾರೆ ಎಂದು ಸ್ಥಳೀಯರು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳ ಕುಡಿಯುವ ನೀರಿನ ಅವಶ್ಯಕತೆಗಳನ್ನು ಪೂರೈಸಲು ಗೌರಿ ನಾಯ್ಕ್ ಬಾವಿ ತೋಡುತ್ತಿದ್ದರು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಬಾವಿ ಅಗೆಯುವುದನ್ನು ನಿಲ್ಲಿಸಲಾಯಿತು. ಅಗೆದ ಸ್ಥಳದಲ್ಲಿ ಮಕ್ಕಳು ಬೀಳದಂತೆ ಅಧಿಕಾರಿಗಳು ಶೀಟ್‌ನಿಂದ ಮುಚ್ಚಿದ್ದಾರೆ.

ಕಳೆದ ಎರಡು ವಾರಗಳಿಂದ ಗೌರಿ ನಾಯ್ಕ ಗಣೇಶನಗರದ ಅಂಗನವಾಡಿ ಕೇಂದ್ರದ ಹಿಂದುಗಡೆ ಒಂಟಿಯಾಗಿ ಬಾವಿ ತೋಡುವ ಕಾರ್ಯದಲ್ಲಿ ತೊಡಗಿದ್ದರು. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಹಾಗೂ ಶಿರಸಿಯ ಶಿಶು ಅಭಿವೃದ್ಧಿ ಕಾರ್ಯಕ್ರಮ ಅಧಿಕಾರಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT