ಸಚಿವ ಕೆ.ಎಚ್.ಮುನಿಯಪ್ಪ 
ರಾಜ್ಯ

ಕೇಂದ್ರದ 'ಭಾರತ್ ರೈಸ್' ಯೋಜನೆಯಿಂದ ದೇಶ ಆರ್ಥಿಕ ದಿವಾಳಿಯಾಗಲಿದೆ: ಸಚಿವ ಕೆ.ಎಚ್.ಮುನಿಯಪ್ಪ

ಪ್ರತಿ ಕೆಜಿ ಅಕ್ಕಿಯನ್ನು 29 ರೂ.ಗೆ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶವನ್ನು ದಿವಾಳಿಯಾಗಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಂಗಳವಾರ ಹೇಳಿದರು,

ಬೆಂಗಳೂರು: ಪ್ರತಿ ಕೆಜಿ ಅಕ್ಕಿಯನ್ನು 29 ರೂ.ಗೆ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶವನ್ನು ದಿವಾಳಿಯಾಗಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಂಗಳವಾರ ಹೇಳಿದರು,

ವಿಧಾನ ಪರಿಷತ್​​ನ ಶೂನ್ಯವೇಳೆಯಲ್ಲಿ ಪ್ರತಿಪಕ್ಷ ಮುಖ್ಯ ಸಚೇತಕ ರವಿಕುಮಾರ್, ರಾಜ್ಯದಲ್ಲಿ ಹಸಿವಿನಿಂದ ಸಾವಿನ ವರದಿಯಾಗಿದೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಿಲ್ಲ ಎನ್ನುವ ಕುರಿತ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ನಾವು ನೀಡುವ ವಾಗ್ದಾನದಂತೆ ನಡೆದುಕೊಂಡಿದ್ದೇವೆ. ಹಸಿವಿನಿಂದ ಯಾರೂ ಮೃತಪಟ್ಟ ಘಟನೆ ವರದಿಯಾಗಿಲ್ಲ. ಅದಕ್ಕೆ ಬಿಡುವುದೂ ಇಲ್ಲ, ಈಗಾಗಲೇ ಫಲಾನುಭವಿಗಳಿಗೆ 4,411 ಕೋಟಿ ರೂ ಹಣ ಬಿಡುಗಡೆ ಮಾಡಿ ಡಿಬಿಟಿ ಮೂಲಕ ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಅಕ್ಕಿ ಇದ್ದರೂ ನಮಗೆ ಕೊಡಲಿಲ್ಲ ಹಾಗಾಗಿ ನಾವು ಮಾತುಕೊಟ್ಟಂತೆ ಅಕ್ಕಿ ಬದಲು ಹಣ ಕೊಡುತ್ತಿದ್ದೇವೆ. ಪ್ರತಿ ಕೆಜಿ ಅಕ್ಕಿಗೆ 34 ರೂ. ನಂತೆ ಕೇಂದ್ರದ ಆಹಾರ ನಿಗಮ ಪೂರೈಕೆ ಮಾಡಲಿದೆ. ಆದರೆ ನಮಗೆ ಮಾತ್ರ ಹೆಚ್ಚುವರಿ ಅಕ್ಕಿ ಸರಬರಾಜಿಗೆ ನಿರಾಕರಿಸಿದೆ. ಕೇಂದ್ರದಿಂದ ಅಕ್ಕಿ ಸಿಗದ ಕಾರಣ ಬೇರೆ ಕಡೆ ಖರೀದಿಗೆ ಪ್ರಯತ್ನಿಸಿದೆವು. ಆದರೆ, ಬೇರೆ ರಾಜ್ಯಗಳಲ್ಲಿ ದರ ಹೆಚ್ಚಿದೆ. ನಮ್ಮ ದರಕ್ಕೆ ಸಿಗಲಿಲ್ಲ ಹಾಗಾಗಿ ಕೇಂದ್ರ ನಿಗದಿಪಡಿಸಿರುವ ಕೆಜಿ ಅಕ್ಕಿಗೆ 34 ರೂ. ಹಣವನ್ನು ಫಲಾನುಭವಿಗಳ ಖಾತೆಗೆ ಹಾಕುತ್ತಿದ್ದೇವೆ.

ರವಿಕುಮಾರ್ ಆರೋಪ ಮಾಡಿರುವಂತೆ ಹಸಿವಿನಿಂದ ರಾಜ್ಯದಲ್ಲಿ ಯಾರೂ ಸತ್ತಿಲ್ಲ, ನಮಗಿರುವ ಮಾಹಿತಿಯಂತೆ ಯಾರೂ ಸತ್ತಿಲ್ಲ, ಖಚಿತ ಮಾಹಿತಿ ಇದ್ದರೆ ನೀಡಿ ಎಂದ ಮುನಿಯಪ್ಪ, ಭಾರತ ಸರ್ಕಾರ 38,39,40 ರೂ.ನಂತೆ ತೆಲಂಗಾಣ ಸೇರಿ ಇತರ ರಾಜ್ಯಗಳಿಂದ ಅಕ್ಕಿ ಖರೀದಿಸಿ ನಂತರ 10 ರೂ. ಗಳನ್ನು ಪ್ರತಿ ಕೆಜಿ ಪ್ರೋಸೆಸ್ ಮಾಡಲು ವೆಚ್ಚ ಮಾಡಿದೆ. ಹಾಗಾಗಿ ಒಟ್ಟಾರೆ ಪ್ರತಿ ಕೆಜಿಗೆ 50 ರೂ ಆಸು ಪಾಸು ಇರಲಿದೆ. ಆದರೆ ಆ ಅಕ್ಕಿಯನ್ನು ಭಾರತ್ ರೈಸ್ ಹೆಸರಿನಲ್ಲಿ ಪ್ರತಿ ಕೆಜಿಗೆ 29 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಪ್ರತಿ ಕೆಜಿಗೆ 20 ರೂ. ನಂತ ನಷ್ಟ ಮಾಡಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿದೆ. 60 ಲಕ್ಷ ಮೆಟ್ರಿಕ್ ಟನ್​​ಗೆ ಪ್ರತಿ ಕೆಜಿಗೆ 20 ರೂ ನಂತೆ ನಷ್ಟ ಮಾಡಿ ಆರ್ಥಿಕ ದಿವಾಳಿಗೆ ದೇಶವನ್ನು ನೂಕಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT