ಜೆರೋಸಾ ಶಾಲೆಯ ಶಿಕ್ಷಕಿ 
ರಾಜ್ಯ

ಮಂಗಳೂರು: ಜೆರೋಸಾ ಘಟನೆ ಬೆನ್ನಲ್ಲೇ ಡಿಡಿಪಿಐ ವರ್ಗಾವಣೆ!

ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ದಯಾನಂದ ಆರ್ ನಾಯ್ಕ್ ಅವರನ್ನು ಬುಧವಾರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಿದೆ.

ಮಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ದಯಾನಂದ ಆರ್ ನಾಯ್ಕ್ ಅವರನ್ನು ಬುಧವಾರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಿದೆ.

ಹಿಂದೂ ಧರ್ಮ ಮತ್ತು ಅದರ ದೇವರುಗಳ ವಿರುದ್ಧ ಇಂಗ್ಲಿಷ್ ಶಿಕ್ಷಕಿಯೊಬ್ಬರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾದ ಸೇಂಟ್ ಜೆರೋಸಾ ಶಾಲೆಯ ಘಟನೆಯನ್ನು ನಾಯಕ್ ನಿರ್ವಹಿಸಿದ ರೀತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ನಂತರ ಈ ಬೆಳವಣಿಯಾಗಿದೆ. ಡಿಡಿಪಿಐ ನಾಯ್ಕ್ ಅವರು ಸೂಕ್ಷ್ಮ ವಿಷಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ರಮಾನಾಥ್ ರೈ ಮಂಗಳವಾರ ಆರೋಪಿಸಿದ್ದರು. 

ಈ ಘಟನೆಗೆ ಸಿಪಿಐ(ಎಂ) ಮತ್ತು ಇತರ ಸಂಘಟನೆಗಳು ನಾಯಕ್ ಅವರನ್ನು ದೂಷಿಸಿದ್ದವು. ಅಲ್ಲದೇ, ಘಟನೆ ಬಗ್ಗೆ ತನಿಖೆ ನಡೆಸಲು ಅವರಿಗೆ ಅವಕಾಶ ನೀಡದಂತೆ ಸರ್ಕಾರವನ್ನು ಒತ್ತಾಯಿಸಿದ್ದವು. ನಾಯಕ್ ಅವರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಆರೋಪ ನಿರಾಕರಿಸಿದ ಮಂಗಳೂರು ಧರ್ಮಪ್ರಾಂತ್ಯ, ಬಿಜೆಪಿ ಶಾಸಕನ ವಿರುದ್ಧ ವಾಗ್ದಾಳಿ: ಈ ಮಧ್ಯೆ ಜೆರೋಸಾ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಂಗಳೂರು ಧರ್ಮಪ್ರಾಂತ್ಯ ಈ ಬಗ್ಗೆ ನ್ಯಾಯಕ್ಕಾಗಿ ಕೋರಿದೆ.  ಧಾರ್ಮಿಕ ಮುಖಂಡರಾದ ಜೆ ಬಿ ಸಲ್ದಾನ ಮತ್ತು ರಾಯ್ ಕ್ಯಾಸ್ಟಲಿನೊ ಅವರು ಶಿಕ್ಷಕಿ ವಿರುದ್ಧದ ಆರೋಪಗಳನ್ನು ಆಧಾರರಹಿತ ಎಂದು ಬಣ್ಣಿಸಿದ್ದಾರೆ.

ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಶಿಕ್ಷಕಿ ಭರವಸೆ ನೀಡಿದ ಬಳಿಕವೂ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರು ಶಾಲೆಯ ಮುಂದೆ ಪ್ರತಿಭಟನೆ ನಡೆಸುವ ಮೂಲಕ ನ್ಯಾಯಯುತ ತನಿಖೆಯ ಸಾಂವಿಧಾನಿಕ ಪ್ರಕ್ರಿಯೆಯ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಹೇಳಿಕೆಯಲ್ಲಿ  ಆರೋಪಿಸಿದ್ದಾರೆ.

ಶಾಸಕರು ಮಹಿಳಾ ಸಿಬ್ಬಂದಿಯ ಮೇಲೆ ಹಗೆತನದ ವಾತಾವರಣ ಸೃಷ್ಟಿಸಿ ಕಿರುಕುಳ ನೀಡಲು ಆರಂಭಿಸಿದ್ದು, ಅಂತಿಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ವಿದ್ಯಾರ್ಥಿ ಸಮುದಾಯದ ಸುರಕ್ಷತೆಗಾಗಿ ಒತ್ತಡಕ್ಕೆ ಮಣಿದು ಶಿಕ್ಷಕಿಯನ್ನು ಅಮಾನತುಗೊಳಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವಂತೆ  ಶಿಕ್ಷಕಿ ಅಂತಹ ಯಾವುದನ್ನೂ ಕಲಿಸಿಲ್ಲ ಅಥವಾ ಹೇಳಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು, ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಆಯೋಗ ಈ ಬಗ್ಗೆ ನ್ಯಾಯಯುತ ತನಿಖೆ ನಡೆಸುವಂತೆ ಮಂಗಳೂರು ಧರ್ಮಪ್ರಾಂತ್ಯ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT