ಡಿಕೆ.ಶಿವಕುಮಾರ್ 
ರಾಜ್ಯ

ಪೆರಿಫರೆಲ್ ರಿಂಗ್ ರಸ್ತೆಯನ್ನು ಎಕನಾಮಿಕ್ ಕಾರಿಡಾರ್ ಆಗಿ ಪರಿವರ್ತಿಸಲಾಗುವುದು: ಡಿಕೆ. ಶಿವಕುಮಾರ್​

ಪೆರಿಫರೆಲ್ ರಿಂಗ್ ರಸ್ತೆ ಯೋಜನೆಯನ್ನು ಎಕನಾಮಿಕ್ ಕಾರಿಡಾರ್ ಎಂದು ಕಾರ್ಯರೂಪಕ್ಕೆ ತರಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ಪೆರಿಫರೆಲ್ ರಿಂಗ್ ರಸ್ತೆ ಯೋಜನೆಯನ್ನು ಎಕನಾಮಿಕ್ ಕಾರಿಡಾರ್ ಎಂದು ಕಾರ್ಯರೂಪಕ್ಕೆ ತರಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಶೈಲೇಂದ್ರ ಬೆಲ್ದಾಳೆ, ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಕುರಿತು ಸರ್ಕಾರದ ಗಮನ ಸೆಳೆದರು.

ಇದಕ್ಕೆ ಉತ್ತರ ನೀಡಿದ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಪೆರಿಫರೆಲ್ ರಿಂಗ್ ರಸ್ತೆಯನ್ನು ಎಕನಾಮಿಕ್ ಕಾರಿಡಾರ್ ಎಂದು ಹೆಸರು ಬದಲಾಯಿಸುತ್ತೇವೆ. 73 ಕಿ.ಮೀ.‌ ಉದ್ಧದ ಈ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಕೈಗೊಂಡು, ಇದರ ಮಾದರಿಯನ್ನು ಸ್ವಲ್ಪ ಬದಲಾಯಿಸುತ್ತೇವೆ" ಎಂದು ಹೇಳಿದರು.

ಕಳೆದ ತಿಂಗಳು ಟೆಂಡರ್ ಕರೆಯಲಾಗಿದ್ದು, ಬಿಡ್ ಕೂಡ ಸ್ವೀಕಾರ ಆಗಿದೆ. ಹಣಕಾಸು ಕ್ರೋಢೀಕರಣ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇವೆ. ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಭೂಸ್ವಾಧೀನ ಸೇರಿ 23 ಸಾವಿರ ಕೋಟಿ ರೂಪಾಯಿ ಅಗತ್ಯ ಇದೆ. ಭೂಮಿ ಕೊಟ್ಟ ರೈತರಿಗೂ ಹೆಚ್ಚು ಪರಿಹಾರ ಕೊಡಲು ಚಿಂತನೆ ಇದೆ. ಯೋಜನೆ ಬಗ್ಗೆ ಸಂಪುಟ ಸಚಿವ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ" ಎಂದು ತಿಳಿಸಿದರು.

15 ವರ್ಷದಿಂದ ಈ ಯೋಜನೆ ನನೆಗುದಿಗೆ ಬಿದ್ದಿದೆ. ಯೋಜನೆಗೆ 2,596 ಎಕರೆ ಜಮೀನು ಬೇಕು. ಈ ಪೈಕಿ ಕೇವಲ 220 ಎಕರೆ ಮಾತ್ರ ಸರ್ಕಾರದ ಜಮೀನಾಗಿದೆ. ಉಳಿದ ಜಮೀನು ಖಾಸಗಿಯವರದ್ದಾಗಿದೆ. ನ್ಯಾಯಾಲಯದಲ್ಲಿ ಪರಿಹಾರ ಸಂಬಂಧ ತೀರ್ಪು ಇದೆ. ಇದನ್ನು ಸಂಪುಟಕ್ಕೆ ತೆಗೆದುಕೊಂಡು ಹೋಗಿ ತೀರ್ಮಾನ ಮಾಡಲಿದ್ದೇವೆ.

ಸ್ವಾಧೀನ‌ ಮಾಡಿದ ಭೂಮಿಯನ್ನು ಡಿನೋಟಿಫೈ ಮಾಡಲ್ಲ ಎಂದು ರೈತರಿಗೆ ನಾನು ಈಗಾಗಲೇ ಹೇಳಿದ್ದೇನೆ. 23,000 ಕೋಟಿ ರೂ.‌ ಹಣ ಈ ಯೋಜನೆಗೆ ಬೇಕಾಗಿದೆ. ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನಾವು ಬದ್ಧರಾಗಿದ್ದೇವೆ" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?