ಸಾಂದರ್ಭಿಕ ಚಿತ್ರ Representational image
ರಾಜ್ಯ

5 ಲಕ್ಷ ಕೊಡದಿದ್ದರೆ ಅಳಿಯನಿಗೆ ನಗ್ನ ಫೋಟೋ ಕಳಿಸ್ತೀನಿ: ಜೈಲಿನಲ್ಲಿದ್ದುಕೊಂಡೆ ರೌಡಿಯಿಂದ ಮಹಿಳೆಗೆ ಬ್ಲ್ಯಾಕ್ ಮೇಲ್!

ಜೈಲಿನಲ್ಲಿದ್ದುಕೊಂಡೆ ಮಹಿಳೆಗೆ ಹಣಕ್ಕಾಗಿ ರೌಡಿಯೊಬ್ಬ ಬ್ಲ್ಯಾಕ್‌ಮೇಲ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳ ತಿರುಚಿದ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ.

ಬೆಂಗಳೂರು: ಜೈಲಿನಲ್ಲಿದ್ದುಕೊಂಡೆ ಮಹಿಳೆಗೆ ಹಣಕ್ಕಾಗಿ ರೌಡಿಯೊಬ್ಬ ಬ್ಲ್ಯಾಕ್‌ಮೇಲ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳ ತಿರುಚಿದ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ.

ರೌಡಿ ಮನೋಜ್ ಅಲಿಯಾಸ್‌ ಕೆಂಚ ಬೆತ್ತಲೆ ಫೋಟೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದವನು. ಕಳೆದ ಆಗಸ್ಟ್‌ನಲ್ಲಿ ಈ ರೌಡಿ ಮನೋಜ್ ಮತ್ತವನ ಗ್ಯಾಂಗ್ ಯುವತಿಯ ತಾಯಿಗೆ ಫೋಟೊ ಕಳಿಸಿ ಹಣ ಕಿತ್ತಿತ್ತು. ʼಹಣ ಕೊಡದಿದ್ದರೆ ನಿನ್ನ ಮಗಳ ಬೆತ್ತಲೆ ಫೋಟೊ ನಿನ್ನ ಅಳಿಯನಿಗೆ ಕಳಿಸುವುದಾಗಿ ಬೆದರಿಕೆ ಹಾಕಿದ್ದ. ಹೀಗೆ ಫೋಟೊ ತೋರಿಸಿ ತಾಯಿಯಿಂದ 40 ಸಾವಿರ ಹಣ ಕಿತ್ತಿದ್ದ. ಅದರಂತೆ ಮಹಿಳೆ ತಾಯಿ ಚೋಟು ಎಂಬವನ ಖಾತೆಗೆ 20 ಸಾವಿರ ರೂ., ಮತ್ತೊಬ್ಬನ ಖಾತೆಗೆ 20 ಸಾವಿರ ರೂ. ಹಣ ಹಾಕಿದ್ದರು.

ಫೆಬ್ರವರಿ 9ರಂದು ಮತ್ತೆ ಮನು ಸಹಚರ ರೌಡಿ ಕಾರ್ತಿಕ್ ಎಂಬಾತ ತಾಯಿಗೆ ಮತ್ತೆ ವಾಟ್ಸ್ಯಾಪ್ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಮನು ಕಡೆಯ ಹುಡುಗ ನಾನು. 5 ಲಕ್ಷ ರೂ. ಹಣ ಕೊಡದಿದ್ದರೆ ಫೋಟೊವನ್ನು ನಿನ್ನ ಅಳಿಯನಿಗೆ ಕಳಿಸ್ತೀನಿ ಎಂದು ಅವಾಜ್ ಹಾಕಿದ್ದಾನೆ. ಫೆಬ್ರವರಿ 12ರಂದು ರೌಡಿ ಮನು ಜೈಲಿನಿಂದಲೇ ಕರೆ ಮಾಡಿ ಧಮಕಿ ಹಾಕಿದ್ದಾನೆ.

ಫೋಟೊ ಮಾರ್ಫ್ ಮಾಡಿ ಬೆದರಿಸುತ್ತಿದ್ದಾರೆ ಎಂದು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮಹಿಳೆಯ ದೂರಿನ ಅನ್ವಯ ಮಾಹಿತಿ ತಂತ್ರಜ್ಞಾನ ಆ್ಯಕ್ಟ್‌ 67, ಐಪಿಸಿ ಸೆಕ್ಷನ್‌ 34, 384ರ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಟೌನ್‌ ಪೊಲೀಸರು ಮತ್ತೊಬ್ಬ ಆರೋಪಿ ಕಾರ್ತಿಕ್‌ ಪತ್ತೆಗೆ ಬಲೆ ಬೀಸಿದ್ದಾರೆ. ಸದ್ಯ ಮನುವನ್ನ ಜೈಲಿನಿಂದ ಬಾಡಿವಾರೆಂಟ್ ಆಧಾರದ ಮೇಲೆ ಮೇಲೆ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT