ಸಿಎಂ ಸಿದ್ದರಾಮಯ್ಯ  
ರಾಜ್ಯ

ಬೆಂಗಳೂರಿಗೆ ಕಾವೇರಿ ನೀರು: ಮೇ ವೇಳೆಗೆ 5ನೇ ಹಂತದ ಯೋಜನೆ ಕಾರ್ಯಾರಂಭ - ಸಿಎಂ ಸಿದ್ದರಾಮಯ್ಯ

ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯತೆಯನ್ನು ಪೂರೈಸಲು ಕಾವೇರಿ ಐದನೇ ಹಂತದ ಯೋಜನೆಯು ಈ ವರ್ಷ ಮೇ ವೇಳೆಗೆ ಕಾರ್ಯಾರಂಭ ಮಾಡಲಿದೆ

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯತೆಯನ್ನು ಪೂರೈಸಲು ಕಾವೇರಿ ಐದನೇ ಹಂತದ ಯೋಜನೆಯು ಈ ವರ್ಷ ಮೇ ವೇಳೆಗೆ ಕಾರ್ಯಾರಂಭ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ದಿನಕ್ಕೆ 775 ಮಿಲಿಯನ್ ಲೀಟರ್ ಸಾಮರ್ಥ್ಯದ 5,550 ಕೋಟಿ ರೂಪಾಯಿ ವೆಚ್ಚದ ಕಾವೇರಿ ಐದನೇ ಹಂತದ ಯೋಜನೆಯು 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ನೀರು ಒದಗಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

ಕಾವೇರಿ ಹಂತ-5ರ ಅಡಿಯಲ್ಲಿ ಡಿಸೆಂಬರ್ 2024 ರೊಳಗೆ ಒಳಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯ ಭಾಗವಾಗಿ 228 ಕಿಮೀ ಒಳಚರಂಡಿ ಪೈಪ್‌ಲೈನ್ ಮತ್ತು 13 ಕೊಳಚೆ ನೀರು ಸಂಸ್ಕರಣಾ ಘಟಕಗಳನ್ನು(ಎಸ್‌ಟಿಪಿ) ನಿರ್ಮಿಸಲಾಗುವುದು. ಈ ಮೂಲಕ ದಿನಕ್ಕೆ 100 ಮಿಲಿಯನ್ ಲೀಟರ್ (ಎಂಎಲ್‌ಡಿ) ಕೊಳಚೆ ನೀರನ್ನು ಸಂಸ್ಕರಿಸಲಾಗುವುದು ಎಂದರು.

268 ಎಂಎಲ್‌ಡಿ ಕೊಳಚೆ ನೀರಿನ ದೈನಂದಿನ ಸಂಸ್ಕರಣೆ ಮತ್ತು ಮರುಬಳಕೆಗಾಗಿ ಏಳು ಎಸ್‌ಟಿಪಿಗಳನ್ನು 441 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾಗುವುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಗೆ ಹೊಸದಾಗಿ ಸೇರಿಸಲಾದ 110 ಹಳ್ಳಿಗಳಿಗೆ 200 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯ ಹಂತ-2 ಅನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT