ಕೊನೆ ಕ್ಷಣದಲ್ಲಿ ಇಂದು ಬಜೆಟ್ ಮಂಡನೆಗೆ ಬಜೆಟ್ ಪ್ರತಿಯನ್ನು ಪರಿಶೀಲಿಸುತ್ತಿರುವ ಸಿಎಂ ಸಿದ್ದರಾಮಯ್ಯ  
ರಾಜ್ಯ

ಬೆಳಗ್ಗೆ 10.15ಕ್ಕೆ ಬಜೆಟ್ ಮಂಡನೆ: ವಿಶೇಷ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡನೆ ಮಾಡಲಿದ್ದು, ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಡುವೆ, ಮತ್ತೊಂದೆಡೆ ಲೋಕಸಭೆ ಚುನಾವಣೆಯೂ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಜೆಟ್ ಮೇಲಿನ ನಿರೀಕ್ಷೆಗಳು ಹೆಚ್ಚಾಗಿವೆ.

ಕಳೆದ ಬಾರಿ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3.50 ಲಕ್ಷ ಕೋಟಿ ಅಥವಾ 3.80 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ. ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯನವರು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ವಿಶೇಷ ಸಂಪುಟ ಸಭೆ: ಇಂದು ಬೆಳಗ್ಗೆ 10.15ಕ್ಕೆ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದು ಅದಕ್ಕೂ ಮುನ್ನ ವಿಶೇಷ ಸಂಪುಟ ನಡೆಯಲಿದೆ. ಅದರಲ್ಲಿ ಸರ್ಕಾರದ ಪ್ರಮುಖ ಇಲಾಖೆಗಳ ಸಚಿವರು ಭಾಗವಹಿಸಿ ಬಜೆಟ್ ನೀಡುವ ಅನುಮೋದನೆಗಳು, ಯೋಜನೆಗಳು, ಅನುದಾನಗಳಿಗೆ ಒಪ್ಪಿಗೆ ಪಡೆಯಲಿದ್ದಾರೆ. ಸಂಪುಟ ಸಭೆಯಲ್ಲಿ ಏನೇನು ಚರ್ಚೆಗಳು ನಡೆಯಲಿವೆ ಎಂಬ ಕುತೂಹಲ ಕೂಡ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT