ಡಿ.ಕೆ ಶಿವಕುಮಾರ್ 
ರಾಜ್ಯ

ಬಜೆಟ್ ಆಶಾದಾಯಕವಾಗಿರಲಿದ್ದು ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ: ಡಿ.ಕೆ ಶಿವಕುಮಾರ್

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ರಾಜ್ಯ ಬಜೆಟ್ ಆಶಾದಾಯಕವಾಗಿರಲಿದ್ದು ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ.

ಕಳೆದ 8 ತಿಂಗಳುಗಳಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಲು ಕ್ರಮ ಕೈಗೊಂಡಿದ್ದೇವೆ. ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ, ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದಿದ್ದಾರೆ.

ಮಹದಾಯಿ ಯೋಜನೆ ಅನುಷ್ಠಾನಕ್ಕೆ ನಾವು ಒತ್ತಾಯ ಮಾಡುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ಸಹಕಾರ ಕೊಡುತ್ತಿಲ್ಲ. ನಾವು ಕಾಮಗಾರಿಗಾಗಿ ಟೆಂಡರ್ ಕರೆದಿದ್ದೇವೆ. ಕೇಂದ್ರ ಸರ್ಕಾರ ಅನುಮೋದನೆ ಕೊಡುತ್ತಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಕೇಂದ್ರದ ಪತ್ರ ಹಿಡಿದು ಸಂಭ್ರಮಾಚರಣೆ ಮಾಡಿದ್ದರು. ಅಂಥ ಬಿಜೆಪಿ ನಾಯಕರಿಂದ, ಸಂಸದರಿಂದ ನೀವು ಉತ್ತರ ಕೇಳಿ ಎಂದರು.

ಗ್ಯಾರಂಟಿ ಲೂಟಿ ಎಂದು ಹೇಳಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ರಾಜ್ಯದ ಜನ ಸರಿಯಾಗಿ ಉತ್ತರ ಕೊಡುತ್ತಾರೆ. ಬಜೆಟ್ ಬಳಿಕ ನಿಗಮ-ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಚುನಾವಣೆ ಬಾಂಡ್ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪಕ್ಷದ ವಕ್ತಾರರು ಹೇಳಿಕೆ ನೀಡುವರು ಎಂದು ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT