ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಹೇಳಿಕೆ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಎಂಬ ಪಂಚ ಗ್ಯಾರಂಟಿ ಯೋಜನೆಗಳಿಂದ 1.2ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ...

ಬೆಂಗಳೂರು: ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಎಂಬ ಪಂಚ ಗ್ಯಾರಂಟಿ ಯೋಜನೆಗಳಿಂದ 1.2ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ ಎಂಬ ಸರ್ಕಾರದ ಹೇಳಿಕೆ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಕಿಡಿಕಾರಿದರು.

ವಿಧಾನಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಖಾತರಿ ಯೋಜನೆಗಳಿಂದಾಗಿ 1.2 ಕೋಟಿ ಕುಟುಂಬಗಳು ಬಿಪಿಎಲ್ ವರ್ಗದಿಂದ ಹೊರಬಂದು ಮಧ್ಯಮ ವರ್ಗದ ಸ್ಥಿತಿಗೆ ಏರಿವೆ ಎಂದು ರಾಜ್ಯಪಾಲರು ಹೇಳಿದ್ದರು. ಹಾಗಿದ್ದರೆ, ಸರ್ಕಾರದ ಇತ್ತೀಚಿನ ಜನಸ್ಪಂದನ ಕಾರ್ಯಕ್ರಮಕ್ಕೆ 20,000 ಕ್ಕೂ ಹೆಚ್ಚು ಜನರು ಹಾಜರಿದ್ದದ್ದು ಏಕೆ?" ಎಂದು ಪ್ರಶ್ನಿಸಿದರು.

‘ನಾನು ಹಿಂದೆ ಮನಮೋಹನ್‌ ಸಿಂಗ್ ಅವರ ‘ಮನಮೋಹನಾಮಿಕ್ಸ್‌’ ಬಗ್ಗೆ ಕೇಳಿದ್ದೇನೆ. ಈಗ ಮೋದಿ ಅವರ ‘ಮೋದಿನಾಮಿಕ್ಸ್‌’ ಬಗ್ಗೆ ತಿಳಿದಿದ್ದೇನೆ. ಜಪಾನ್‌ನ ಮಾಜಿ ಪ್ರಧಾನಿ ದಿವಂಗತ ಶಿಂಜೋ ಅಬೆ ಅವರ ‘ಅಬೆನಾಮಿಕ್ಸ್‌’ ಬಗ್ಗೆಯೂ ತಿಳಿದುಕೊಂಡಿದ್ದೇನೆ. ಆದರೆ, ‘ಸಿದ್ದನಾಮಿಕ್ಸ್‌’ ಬಲು ಅಪಾಯಕಾರಿ’.

‘ಒಂದು ಕೈಯಲ್ಲಿ ಗ್ಯಾರಂಟಿಗಳನ್ನು ಕೊಟ್ಟು ಜನರನ್ನು ಬಡತನದಿಂದ ಮಧ್ಯಮವರ್ಗಕ್ಕೆ ತಂದಿದ್ದೇನೆ ಎನ್ನುವ ರಾಜ್ಯ ಸರ್ಕಾರ, ಹಾಗೆ ಕೊಟ್ಟು ಹತ್ತು ಕೈಗಳಲ್ಲಿ ಹೀಗೆ ಆ ಹಣವನ್ನು ಕಿತ್ತುಕೊಳ್ಳುತ್ತಿದೆ. ಈ ಸಿದ್ದನಾಮಿಕ್ಸ್‌ ರಾಜ್ಯವನ್ನು ವಿನಾಶದ ಅಂಚಿಗೆ ದೂಡುತ್ತಿದೆ’ ಎಂದು ದೂರಿದರು.

‘ಗ್ಯಾರಂಟಿಗಳ ಮೂಲಕ ಜನರ ಆರ್ಥಿಕ ಶಕ್ತಿ, ಖರೀದಿ ಶಕ್ತಿ ಹೆಚ್ಚಿದೆ ಎನ್ನುವ ಸರ್ಕಾರ, ಮುದ್ರಾಂಕ ಶುಲ್ಕವನ್ನು ಐದು ಪಟ್ಟು ಹೆಚ್ಚಿಸಿದೆ. ಮಾರ್ಗಸೂಚಿ ದರ ಆಸ್ತಿ ದರಕ್ಕಿಂತಲೂ ಹೆಚ್ಚಾಗಿದೆ. ಅಬಕಾರಿ ಸುಂಕ ಏರುತ್ತಲೇ ಇದೆ. ತೆರಿಗೆ ಮೂಲಕ ಜನರನ್ನು ಹೀರುವ ಆರ್ಥಿಕತೆಯು ರಾಜ್ಯದ ಅಭಿವೃದ್ಧಿಗೆ ಯಾವ ಸೀಮೆಯ ಉತ್ತೇಜನ ನೀಡುತ್ತದೆ’ ಎಂದು ಪ್ರಶ್ನಿಸಿದರು.

‘ರಾಜ್ಯವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಲು ಕೇಂದ್ರ ಸರ್ಕಾರ ಕಾರಣ ಎಂದು ರಾಜ್ಯ ಸರ್ಕಾರ ಪ್ರಚಾರ ಮಾಡುತ್ತಿದೆ. ಸಂಘರ್ಷಕ್ಕೆ ಇಳಿದರೆ ಯಾರಾದರೂ ಗೌರವ ಕೊಡ್ತಾರಾ’ ಎಂದೂ ಪ್ರಶ್ನಿಸಿದರು.

‘ತಮಿಳುನಾಡಿನ ರಾಜ್ಯಪಾಲರು ಅಲ್ಲಿನ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ತಿರಸ್ಕರಿಸಿದ್ದರು. ನಮ್ಮ ರಾಜ್ಯಪಾಲರು ರಾಜ್ಯ ಸರ್ಕಾರದ ಭಾಷಣವನ್ನು ಓದಿದ್ದಾರೆ. ತಮಿಳುನಾಡಿನ ರಾಜ್ಯಪಾಲರಂತಹ ಸಂಪ್ರದಾಯ ಇಲ್ಲಿ ನಡೆದಿಲ್ಲ. ಅದಕ್ಕಾಗಿ ರಾಜ್ಯಪಾಲರನ್ನು ಅಭಿನಂದಿಸುತ್ತೇನೆ’ ಎಂದರು.

‘ಎರಡು ಬಾರಿ ಆಕಸ್ಮಿಕವಾಗಿ ರಾಜ್ಯದ ಮುಖ್ಯಮಂತ್ರಿಯಾಗಿದ್ದೆ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಯುಪಿಎ ಸರ್ಕಾರ ಹಾಗೂ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಕೇಂದ್ರದಿಂದ ನನಗೆ ಸಹಕಾರ ಸಿಕ್ಕಿತ್ತು. ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ದಿನಗಳ ಸಂಖ್ಯೆ ಹೆಚ್ಚಳ, ರಸ್ತೆ ವಿಸ್ತರಣೆಗೆ ರಕ್ಷಣಾ ಇಲಾಖೆ ಜಮೀನು ಹಸ್ತಾಂತರ ಸೇರಿದಂತೆ ಹಲವು ವಿಚಾರಗಳಲ್ಲಿ ಸಕಾರಾತ್ಮಕ ಸ್ಪಂದನೆ ದೊರಕಿತ್ತು’ ಎಂದು ಇದೇ ವೇಳೆ ಹಲವು ಉದಾಹರಣೆಗಳನ್ನು ನೀಡಿದರು.

‘ಕೇಂದ್ರ ಸರ್ಕಾರದಿಂದ ಅನ್ಯಾಯ ಆಗುತ್ತಿದೆ ಎಂದು ಹೇಳುತ್ತಿದ್ದೀರಿ. 14 ಮತ್ತು 15ನೇ ಹಣಕಾಸು ಆಯೋಗಗಳ ಶಿಫಾರಸುಗಳನ್ನು ಓದಿದ್ದೇನೆ. ನಿತ್ಯ ಆರೋಪ ಮಾಡಿದರೆ ಏಕೆ ಗೌರವ ಕೊಡುತ್ತಾರೆ? ಅನ್ಯಾಯ ಆಗಿರುವುದು ನಿಜವೇ ಆಗಿದ್ದಲ್ಲಿ ನಿಮ್ಮೊಂದಿಗೆ ಪ್ರಧಾನಿಯವರ ಭೇಟಿಗೆ ನಾನು ಸಿದ್ಧ’ ಎಂದು ಆಡಳಿತ ಪಕ್ಷದ ಸದಸ್ಯರಿಗೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT