ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಬಜೆಟ್ 2024: ತಸ್ತಿಕ್ ಮೊತ್ತ ಅರ್ಚಕರ ಬ್ಯಾಂಕ್ ಖಾತೆಗೆ; ಧಾರ್ಮಿಕ ದತ್ತಿ ಇಲಾಖೆಗೆ ಹಲವು ಯೋಜನೆಗಳ ಘೋಷಣೆ

ಇನಾಂ, ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಬೆಂಗಳೂರು: ಇನಾಂ, ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿಗಳು ಧಾರ್ಮಿಕ ದತ್ತಿ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದರು.

  • ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಾಣ.

  • ತಿರುಮಲದಲ್ಲಿ ರೂ.200 ಕೋಟಿ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ ರೂ.85 ಕೋಟಿ ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ ರೂ.11 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಾಣಸಿಯಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

  • ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ರೂ.158 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.

  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ.

  • ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚನೆ. ಇನಾಂ/ ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ಸಿ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್‌ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT