ಸಾಂದರ್ಭಿಕ ಚಿತ್ರ 
ರಾಜ್ಯ

ನಾಗರಹೊಳೆ ಅಭಯಾರಣ್ಯದಲ್ಲಿ ಕಾಡ್ಗಿಚ್ಚು ತಡೆಯಲು 2000 ಕಿ.ಮೀ ಫೈರ್‌ಲೈನ್‌

ಆಕಸ್ಮಿಕವಾಗಿ ಸಂಭವಿಸುವ ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆಯಿಂದ 2000 ಕಿಲೋಮೀಟರ್‌ಗೂ ಹೆಚ್ಚು ಫೈರ್‌ಲೈನ್‌

ಮಡಿಕೇರಿ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಕಸ್ಮಿಕವಾಗಿ ಸಂಭವಿಸುವ ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ 2000 ಕಿಲೋಮೀಟರ್‌ಗೂ ಹೆಚ್ಚು ಫೈರ್‌ಲೈನ್‌ ಎಳೆಯಲು ಮುಂದಾಗಿದೆ.

ನಾಗರಹೊಳೆ ಅಭಯಾರಣ್ಯದ 840 ಚದರ ಕಿಲೋಮೀಟರ್ ಪ್ರದೇಶದಲ್ಲಿ ಅಗ್ನಿಶಾಮಕ ರೇಖೆಗಳನ್ನು ಎಳೆಯಲು ಹೆಚ್ಚುವರಿಯಾಗಿ 400 ಅರಣ್ಯ ವೀಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜೀಪ್‌ಗಳಲ್ಲಿ ಅಳವಡಿಸಲಾಗಿರುವ ಟ್ಯಾಂಕರ್‌ಗಳು, ಸ್ಪ್ರೇಯರ್‌ಗಳು ಮತ್ತು ಇತರ ಅಗತ್ಯ ಯಂತ್ರೋಪಕರಣಗಳನ್ನು ಒಳಗೊಂಡಂತೆ ಇಲಾಖೆಯು ಕಾಡ್ಗಿಚ್ಚನ್ನು ತಡೆಗಟ್ಟಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ನಾಗರಹೊಳೆ ಬೆಲ್ಟ್‌ನ ಎಂಟು ಶ್ರೇಣಿಗಳಲ್ಲಿ, 2500 ಕಿ.ಮೀ ವರೆಗೆ ಫೈರ್ ಲೈನ್ ಗಳನ್ನು ಎಳೆಯಲಾಗಿದೆ. ಸೂಕ್ಷ್ಮ ವಲಯಗಳಲ್ಲಿ ವಾಚ್ ಟವರ್‌ಗಳನ್ನು ಹೆಚ್ಚಿಸಲಾಗಿದೆ. ಅಲ್ಲದೆ ಕಾಡ್ಗಿಚ್ಚು ತಡೆಯಲು ಆಗಾಗ್ಗೆ ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವನ್ಯಜೀವಿಗಳಿಗೆ ಆಸರೆಯಾಗಲು ಅರಣ್ಯ ಪ್ರದೇಶದೊಳಗಿನ ಕೆರೆಗಳಿಗೆ ಟ್ರ್ಯಾಕ್ಟರ್‌ಗಳ ಮೂಲಕ ನೀರು ತುಂಬಿಸಲಾಗುತ್ತಿದೆ ಎಂದು ಇಲಾಖೆ ಮೂಲಗಳು ಖಚಿತಪಡಿಸಿವೆ.

ವಿರಾಜಪೇಟೆ ವಿಭಾಗದಲ್ಲಿ ಮಾಕುಟ್ಟ ಅರಣ್ಯ ವ್ಯಾಪ್ತಿಯ ಪ್ರದೇಶಗಳು ಸೇರಿ ಒಟ್ಟು 1012 ಕಿ.ಮೀ ಉದ್ದದ ಫೈರ್‌ಲೈನ್‌ ಎಳೆಯಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ಇಡಲು ಐದು ತಂಡಗಳನ್ನು ನಿಯೋಜಿಸಲಾಗಿದೆ. ಫೈರ್‌ಲೈನ್‌ಗಳ ಕಾಮಗಾರಿ ಡಿಸೆಂಬರ್‌ನಲ್ಲಿ ಆರಂಭವಾಯಿತು ಎಂದು ವಿರಾಜಪೇಟೆ ಡಿಸಿಎಫ್‌ ಶರಣಬಸಪ್ಪ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT