INSAT-3DS–ಹವಾಮಾನ ಉಪಗ್ರಹ ಉಡಾವಣೆ 
ರಾಜ್ಯ

ಇಸ್ರೋ ಮತ್ತೊಂದು ಮೈಲುಗಲ್ಲು: INSAT-3DS–ಹವಾಮಾನ ಉಪಗ್ರಹ ಉಡಾವಣೆ ಯಶಸ್ವಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶನಿವಾರ ಮತ್ತೊಂದು ಮೈಲುಗಲ್ಲು ಸಾಧಿಸಿದೆ.

ಬೆಂಗಳೂರು: ಜನವರಿ 1 ರಂದು ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಉಪಗ್ರಹ ಉಡಾವಣೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶನಿವಾರ ಮತ್ತೊಂದು ಮೈಲುಗಲ್ಲು ಸಾಧಿಸಿದೆ.

ಇಸ್ರೋ ಇಂದು ಸಂಜೆ ಭಾರತದ ವಿಶೇಷ ಹವಾಮಾನ ಉಪಗ್ರಹವಾದ INSAT-3DS ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹವು ಅಸ್ತಿತ್ವದಲ್ಲಿರುವ ಕಕ್ಷೆಯಲ್ಲಿನ INSAT-3D ಮತ್ತು 3DR ಉಪಗ್ರಹಗಳಿಗೆ ಸೇವೆಗಳ ನಿರಂತರತೆಯನ್ನು ಒದಗಿಸುತ್ತದೆ ಮತ್ತು INSAT ವ್ಯವಸ್ಥೆಯ ಸಾಮರ್ಥ್ಯಗಳನ್ನು ಗಣನೀಯವಾಗಿ ಹೆಚ್ಚಿಸುತ್ತದೆ.

ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್‌ ಧವನ್‌ ಸಂಶೋಧನಾ ಕೇಂದ್ರದಿಂದ ಇನ್‌ಸ್ಯಾಟ್-‌3ಡಿಎಸ್‌ ಉಪಗ್ರಹವನ್ನು ಹೊತ್ತ ಜಿಎಸ್‌ಎಲ್‌ವಿ ರಾಕೆಟ್‌ (GSLV Rocket) ಯಶಸ್ವಿಯಾಗಿ ನಭಕ್ಕೆ ಹಾರಿದೆ ಎಂದು ಇಸ್ರೋ ಎಕ್ಸ್ ನಲ್ಲಿ ತಿಳಿಸಿದೆ.

ಜಿಎಸ್‌ಎಲ್‌ವಿ-ಎಫ್‌ 14 ರಾಕೆಟ್‌ ಮೂಲಕ ಇನ್‌ಸ್ಯಾಟ್‌-3ಡಿಎಸ್‌ ಉಪಗ್ರಹ ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿಯೇ ಕಕ್ಷೆ ಸೇರಿತು. ಭಾರತದ ಹವಾಮಾನ, ಹವಾಮಾನ ಮುನ್ಸೂಚನೆಗಳನ್ನು ನೀಡುವ ದಿಸೆಯಲ್ಲಿ ಈ ಉಪಗ್ರಹ ಹೆಚ್ಚು ಪ್ರಾಮುಖ್ಯತೆ ಪಡೆದಿದೆ.

ಈ ಉಪಗ್ರಹವು ಭೂ ವಿಜ್ಞಾನ ಸಚಿವಾಲಯದ(MoES) ಬಳಕೆದಾರ-ಧನಸಹಾಯದ ಯೋಜನೆಯಾಗಿದ್ದು, 2275 ಕೆಜಿಯಷ್ಟು ಲಿಫ್ಟ್-ಆಫ್ ಮಾಸ್ ಹೊಂದಿದೆ. ಉಪಗ್ರಹ ತಯಾರಿಕೆಗೆ ಭಾರತೀಯ ಕೈಗಾರಿಕೆಗಳು ಗಣನೀಯ ಕೊಡುಗೆ ನೀಡಿವೆ ಎಂದು ಇಸ್ರೋ ಪ್ರಕಟಣೆಯಲ್ಲಿ ತಿಳಿಸಿದೆ.

INSAT-3DS ಉಪಗ್ರಹವನ್ನು ಹವಾಮಾನ ಮುನ್ಸೂಚನೆ ಮತ್ತು ವಿಪತ್ತು ಎಚ್ಚರಿಕೆಗಾಗಿ ಹವಾಮಾನ ವೀಕ್ಷಣೆಗಳು, ಭೂಮಿ ಮತ್ತು ಸಾಗರ ಮೇಲ್ಮೈಗಳ ಮೇಲ್ವಿಚಾರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

ಉಪಗ್ರಹ ಉಡಾವಣೆಯ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು, ಉಪಗ್ರಹವನ್ನು ಉತ್ತಮ ಕಕ್ಷೆಯಲ್ಲಿ ಇರಿಸಲಾಗಿದೆ ಮತ್ತು "ಉತ್ತಮ ಸ್ಥಿತಿಯಲ್ಲಿದೆ" ಎಂದು ಹೇಳಿದರು. ಉಪಗ್ರಹ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ಅದರಲ್ಲಿ ಕೆಲಸ ಮಾಡಿದ ಎಲ್ಲಾ ತಂಡಗಳು ಮತ್ತು ಇಲಾಖೆಗಳನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT