INSAT-3DS–ಹವಾಮಾನ ಉಪಗ್ರಹ ಉಡಾವಣೆ 
ರಾಜ್ಯ

ಇಸ್ರೋ ಮತ್ತೊಂದು ಮೈಲುಗಲ್ಲು: INSAT-3DS–ಹವಾಮಾನ ಉಪಗ್ರಹ ಉಡಾವಣೆ ಯಶಸ್ವಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶನಿವಾರ ಮತ್ತೊಂದು ಮೈಲುಗಲ್ಲು ಸಾಧಿಸಿದೆ.

ಬೆಂಗಳೂರು: ಜನವರಿ 1 ರಂದು ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಉಪಗ್ರಹ ಉಡಾವಣೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶನಿವಾರ ಮತ್ತೊಂದು ಮೈಲುಗಲ್ಲು ಸಾಧಿಸಿದೆ.

ಇಸ್ರೋ ಇಂದು ಸಂಜೆ ಭಾರತದ ವಿಶೇಷ ಹವಾಮಾನ ಉಪಗ್ರಹವಾದ INSAT-3DS ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹವು ಅಸ್ತಿತ್ವದಲ್ಲಿರುವ ಕಕ್ಷೆಯಲ್ಲಿನ INSAT-3D ಮತ್ತು 3DR ಉಪಗ್ರಹಗಳಿಗೆ ಸೇವೆಗಳ ನಿರಂತರತೆಯನ್ನು ಒದಗಿಸುತ್ತದೆ ಮತ್ತು INSAT ವ್ಯವಸ್ಥೆಯ ಸಾಮರ್ಥ್ಯಗಳನ್ನು ಗಣನೀಯವಾಗಿ ಹೆಚ್ಚಿಸುತ್ತದೆ.

ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್‌ ಧವನ್‌ ಸಂಶೋಧನಾ ಕೇಂದ್ರದಿಂದ ಇನ್‌ಸ್ಯಾಟ್-‌3ಡಿಎಸ್‌ ಉಪಗ್ರಹವನ್ನು ಹೊತ್ತ ಜಿಎಸ್‌ಎಲ್‌ವಿ ರಾಕೆಟ್‌ (GSLV Rocket) ಯಶಸ್ವಿಯಾಗಿ ನಭಕ್ಕೆ ಹಾರಿದೆ ಎಂದು ಇಸ್ರೋ ಎಕ್ಸ್ ನಲ್ಲಿ ತಿಳಿಸಿದೆ.

ಜಿಎಸ್‌ಎಲ್‌ವಿ-ಎಫ್‌ 14 ರಾಕೆಟ್‌ ಮೂಲಕ ಇನ್‌ಸ್ಯಾಟ್‌-3ಡಿಎಸ್‌ ಉಪಗ್ರಹ ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿಯೇ ಕಕ್ಷೆ ಸೇರಿತು. ಭಾರತದ ಹವಾಮಾನ, ಹವಾಮಾನ ಮುನ್ಸೂಚನೆಗಳನ್ನು ನೀಡುವ ದಿಸೆಯಲ್ಲಿ ಈ ಉಪಗ್ರಹ ಹೆಚ್ಚು ಪ್ರಾಮುಖ್ಯತೆ ಪಡೆದಿದೆ.

ಈ ಉಪಗ್ರಹವು ಭೂ ವಿಜ್ಞಾನ ಸಚಿವಾಲಯದ(MoES) ಬಳಕೆದಾರ-ಧನಸಹಾಯದ ಯೋಜನೆಯಾಗಿದ್ದು, 2275 ಕೆಜಿಯಷ್ಟು ಲಿಫ್ಟ್-ಆಫ್ ಮಾಸ್ ಹೊಂದಿದೆ. ಉಪಗ್ರಹ ತಯಾರಿಕೆಗೆ ಭಾರತೀಯ ಕೈಗಾರಿಕೆಗಳು ಗಣನೀಯ ಕೊಡುಗೆ ನೀಡಿವೆ ಎಂದು ಇಸ್ರೋ ಪ್ರಕಟಣೆಯಲ್ಲಿ ತಿಳಿಸಿದೆ.

INSAT-3DS ಉಪಗ್ರಹವನ್ನು ಹವಾಮಾನ ಮುನ್ಸೂಚನೆ ಮತ್ತು ವಿಪತ್ತು ಎಚ್ಚರಿಕೆಗಾಗಿ ಹವಾಮಾನ ವೀಕ್ಷಣೆಗಳು, ಭೂಮಿ ಮತ್ತು ಸಾಗರ ಮೇಲ್ಮೈಗಳ ಮೇಲ್ವಿಚಾರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

ಉಪಗ್ರಹ ಉಡಾವಣೆಯ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು, ಉಪಗ್ರಹವನ್ನು ಉತ್ತಮ ಕಕ್ಷೆಯಲ್ಲಿ ಇರಿಸಲಾಗಿದೆ ಮತ್ತು "ಉತ್ತಮ ಸ್ಥಿತಿಯಲ್ಲಿದೆ" ಎಂದು ಹೇಳಿದರು. ಉಪಗ್ರಹ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ಅದರಲ್ಲಿ ಕೆಲಸ ಮಾಡಿದ ಎಲ್ಲಾ ತಂಡಗಳು ಮತ್ತು ಇಲಾಖೆಗಳನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

SCROLL FOR NEXT