ನಕ್ಸಲ್ ಸುರೇಶ್ ಬಂಧನ
ನಕ್ಸಲ್ ಸುರೇಶ್ ಬಂಧನ 
ರಾಜ್ಯ

ಚಿಕ್ಕಮಗಳೂರು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಸುರೇಶ್ ಬಂಧನ

Vishwanath S

ಚಿಕ್ಕಮಗಳೂರು: 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಎಂಬಾತನನ್ನ ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸುರೇಶ್ ಅಲಿಯಾಸ್ ಮಹದೇವ ಮಲೆನಾಡಿನ ನಕ್ಸಲ್ ಚಳುವಳಿಯ ಪ್ರಮುಖ ಪಾತ್ರವಹಿಸಿದ್ದನು. ನಂತರ ತಲೆ ಮರೆಸಿಕೊಂಡಿದ್ದ ಆತ ಕೇರಳದ ಕಣ್ಣೂರಿನ ಅರಣ್ಯದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಕಾಡಾನೆ ದಾಳಿಯಲ್ಲಿ ಗಾಯಗೊಂಡಿದ್ದ ಸುರೇಶ್ ನನ್ನು ಮೊದಲು ಚಿಕಿತ್ಸೆ ಕೊಡಿಸಿದ ಅಲ್ಲಿನ ಪೊಲೀಸರು ನಂತರ ವಿಳಾಸ ವಿಚಾರಣೆ ವೇಳೆ ಈತ ನಕ್ಸಲ್ ಎಂದು ತಿಳಿದುಬಂದಿದೆ.

ಸುರೇಶ್ ನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಸರ್ಕಾರ ಸಹ ಘೋಷಿಸಿತ್ತು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ನಕ್ಸಲ್ ಕೃತ್ಯ ಪ್ರಕರಣಗಳಲ್ಲಿ ಈತನು ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

SCROLL FOR NEXT