ನಕ್ಸಲ್ ಸುರೇಶ್ ಬಂಧನ 
ರಾಜ್ಯ

ಚಿಕ್ಕಮಗಳೂರು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಸುರೇಶ್ ಬಂಧನ

20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಎಂಬಾತನನ್ನ ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು: 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಎಂಬಾತನನ್ನ ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸುರೇಶ್ ಅಲಿಯಾಸ್ ಮಹದೇವ ಮಲೆನಾಡಿನ ನಕ್ಸಲ್ ಚಳುವಳಿಯ ಪ್ರಮುಖ ಪಾತ್ರವಹಿಸಿದ್ದನು. ನಂತರ ತಲೆ ಮರೆಸಿಕೊಂಡಿದ್ದ ಆತ ಕೇರಳದ ಕಣ್ಣೂರಿನ ಅರಣ್ಯದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಕಾಡಾನೆ ದಾಳಿಯಲ್ಲಿ ಗಾಯಗೊಂಡಿದ್ದ ಸುರೇಶ್ ನನ್ನು ಮೊದಲು ಚಿಕಿತ್ಸೆ ಕೊಡಿಸಿದ ಅಲ್ಲಿನ ಪೊಲೀಸರು ನಂತರ ವಿಳಾಸ ವಿಚಾರಣೆ ವೇಳೆ ಈತ ನಕ್ಸಲ್ ಎಂದು ತಿಳಿದುಬಂದಿದೆ.

ಸುರೇಶ್ ನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಸರ್ಕಾರ ಸಹ ಘೋಷಿಸಿತ್ತು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ನಕ್ಸಲ್ ಕೃತ್ಯ ಪ್ರಕರಣಗಳಲ್ಲಿ ಈತನು ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT