ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ್ 
ರಾಜ್ಯ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್‌ ನೇಮಕ

ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು: ಇತ್ತೀಚಿಗಷ್ಟೇ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ಈ ಹಿಂದಿನ ನೇಮಕ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ.

ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ, ಮಾನ್ಯ ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ, ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಕಳೆದ ಜನವರಿ 27ರಂದು ರಾಜ್ಯ ಸರ್ಕಾರ, 35 ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅದರಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿತ್ತು. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ. ಅಂದರೆ ಈಗ ಕ್ರೀಡಾ ಸಚಿವರಾಗಿರುವ ನಾಗೇಂದ್ರ ಅವರೇ ಅಧ್ಯಕ್ಷರು. ಬೇಕಿದ್ದರೆ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಬಹುದು.

ಈ ಎಡವಟ್ಟನ್ನು ಅರ್ಥ ಮಾಡಿಕೊಂಡ ರಾಜ್ಯ ಸರ್ಕಾರ, ವಿಜಯಾನಂದ ಕಾಶಪ್ಪನವರ್‌ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT