ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜ್ಯ

ಸಂವಿಧಾನ ಜಾರಿಯಾಗಿ 75 ವರ್ಷ, ಫೆ.24-25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈ ತಿಂಗಳ 24 ಮತ್ತು 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿ ವಿಧಾನ ಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಜನವರಿ 26ರಿಂದ 31 ಜಿಲ್ಲೆಗಳಲ್ಲೂ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗುತ್ತಿದೆ ಎಂದರು.

ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿದೆ. ಅಮೃತ ಉತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 25ರಂದು ಕೊನೆಯಾಗುತ್ತದೆ. ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯಲಿದೆ ಎಂದರು.

ಪ್ರೊ, ಅಶುತೋಷ್, ಪ್ರಶಾಂತ್ ಭೂಷಣ್, ಮೇದಾ ಪಾಟ್ಕರ್ ಸೇರಿದಂತೆ ಅನೇಕ ಮೇದಾವಿಗಳು ಭಾಗವಹಿಸುತ್ತಿದ್ದಾರೆ. ಜನರ ಭಾವನೆಗಳು, ಸಂವಿಧಾನದ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡ್ತಾರೆ. 24ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟನೆಯಾಗಲಿದೆ. 25ರಂದು ದೊಡ್ಡ ರ್ಯಾಲಿ ಇರುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT