ಸಂಗ್ರಹ ಚಿತ್ರ 
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ: 50 ಸಾವಿರಕ್ಕಿಂತ ಹೆಚ್ಚು ದಂಡವಿರುವ 85 ಬೈಕ್​​ ಸೀಜ್, ದಂಡ ವಸೂಲಿ

ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ದಂಡವಿದ್ದ ವಾಹನಗಳ ವಿರುದ್ದ ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ದಂಡವಿದ್ದ ವಾಹನಗಳ ವಿರುದ್ದ ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಶಕ್ಕೆ ಪಡೆದಿರುವ ಈ ವಾಹನಗಳ ಮೇಲೆ 10,210 ಉಲ್ಲಂಘನಾ ಪ್ರಕರಣಗಳು ದಾಖಲಾಗಿದ್ದು‌, ಸುಮಾರು 1.07 ಕೋಟಿ ರೂಪಾಯಿ ದಂಡ ಸಂಗ್ರಹಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಚಾರ ಪೊಲೀಸರ ಬದಲಾಗಿ ಆತ್ಯಾಧುನಿಕ ಕ್ಯಾಮೆರಾಗಳಿಂದ‌ ಸೆರೆಯಾಗುವ ಪೋಟೋ ಆಧಾರದ ಮೇರೆಗೆ ಪ್ರಕರಣಗಳನ್ನ‌ ದಾಖಲಿಸಿಕೊಳ್ಳಲಾಗುತ್ತಿದೆ. ಪೊಲೀಸರು ಅಡ್ಡಗಟ್ಟುವುದಿಲ್ಲ ಎಂದು ಭಾವಿಸಿ ಹೆಲ್ಮೆಟ್ ರಹಿತ ಚಾಲನೆ, ಸಿಗ್ನಲ್ ಜಂಪ್, ಸೀಟ್ ಬೆಲ್ಟ್ ಹಾಕದಿರುವುದು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದೆ.

ಟ್ರಾಫಿಕ್ ವೈಯಲೇಷನ್ ಮಾಡುವವವರ ವಿರುದ್ಧ ಹಾಗೂ ಮುಖ್ಯವಾಗಿ 50 ಸಾವಿರಕ್ಕಿಂತ ಹೆಚ್ಚು ದಂಡ ಹೊಂದಿರುವ ಸವಾರರ ವಿರುದ್ಧ‌ ಕ್ರಮ‌ಕೈಗೊಳ್ಳುವಂತೆ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ಎಂ.ಎನ್‌.ಅನುಚೇತ್ ನಗರದ ಎಲ್ಲ ವಲಯದ ಡಿಸಿಪಿಗಳಿಗೆ ಸೂಚಿಸಿದ್ದರು.

ಅದರಂತೆ ಕಾರ್ಯಾಚರಣೆ ಕೈಗೊಂಡ ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್​ ದೇವರಾಜ್‌ ನೇತೃತ್ವದಲ್ಲಿ ಕಳೆದ 2-3 ದಿನಗಳಿಂದ ಕಾರ್ಯಾಚರಣೆ ಕೈಗೊಂಡು 84 ಬೈಕ್ ಹಾಗೂ ಒಂದು ಕಾರು ವಶಕ್ಕೆ ಪಡೆದುಕೊಂಡಿದ್ದಾರೆ

ಸೀಜ್ ಮಾಡಲಾದ ಎಲ್ಲ ವಾಹನಗಳ ಮೇಲೆ‌ 50 ಸಾವಿರಕ್ಕಿಂತ ಹೆಚ್ಚು ದಂಡವಿರುವುದು ಕಂಡು ಬಂದಿದೆ. ಒಟ್ಟಾರೆ 10 ಸಾವಿರಕ್ಕಿಂತ ಹೆಚ್ಚು ಸಂಚಾರ ಉಲ್ಲಂಘನೆ ಪ್ರಕರಣಗಳಿದ್ದು, 1 ಕೋಟಿ ರೂಪಾಯಿ ದಂಡವಿದೆ.‌ ಸದ್ಯ ಎಲ್ಲ ವಾಹನಗಳನ್ನ‌ ಸೀಜ್‌ ಮಾಡಿ ವಾಹನ ಮಾಲೀಕರಿಗೆ ನೊಟೀಸ್ ಕಳುಹಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT