ಸಂಗ್ರಹ ಚಿತ್ರ 
ರಾಜ್ಯ

ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಪರಿಹಾರ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ

ಕರ್ನಾಟಕದ ಆನೆಯೊಂದು ವಯನಾಡ್ ಗೆ ನುಗ್ಗಿ ಕೇರಳದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸಾವನ್ನಪ್ಪಿದ ಕೇರಳದ ವ್ಯಕ್ತಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಕರ್ನಾಟಕದ ಆನೆಯೊಂದು ವಯನಾಡ್ ಗೆ ನುಗ್ಗಿ ಕೇರಳದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸಾವನ್ನಪ್ಪಿದ ಕೇರಳದ ವ್ಯಕ್ತಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆನೆ ದಾಳಿಯಿಂದ ಮೃತಪಟ್ಟ ಕರ್ನಾಟಕದ ಜನರಿಗೆ ನೀಡುವ ಪರಿಹಾರಕ್ಕೆ ಸಮನಾದ ಪರಿಹಾರವನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.

2023ರ ನವೆಂಬರ್ 30ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಆನೆಯನ್ನು ಸೆರೆಹಿಡಿದು ಬಂಡೀಪುರ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಎರಡು ತಿಂಗಳ ನಂತರ, ಅದು ಕೇರಳದ ವಯನಾಡ್ ಜಿಲ್ಲೆಗೆ ದಾರಿ ತಪ್ಪಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ 10 ರಂದು ಕೇರಳದ ವಯನಾಡ್ ಜಿಲ್ಲೆಯಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಕೇರಳ ಸರ್ಕಾರವು ಕರ್ನಾಟಕ ಸರ್ಕಾರವನ್ನು ವಿಶಾಲ ಹೃದಯದಿಂದ ಆ ಪ್ರಕರಣಕ್ಕೆ ಪರಿಹಾರ ನೀಡುವಂತೆ ವಿನಂತಿಸಿದೆ ಎಂದು ಸಚಿವರ ಕಚೇರಿ ತಿಳಿಸಿದೆ.

ಖಂಡ್ರೆ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪರಿಹಾರ ಪಾವತಿಸುವ ವಿಷಯವನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅಜೀಶ್ ಕುಟುಂಬಕ್ಕೆ ಕರ್ನಾಟಕದ ಯಾವುದೇ ವ್ಯಕ್ತಿಗೆ ಸಮಾನವಾಗಿ ಪರಿಹಾರ ನೀಡಲು ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT