‘ಮಸ್ಜಿದ್ ದರ್ಶನ’ದ ವೇಳೆ ಮಹಿಳೆ ಮತ್ತು ಅವರ ಮಗಳು ಬಿಲ್ಲಾಲ್ ಮಸೀದಿಯಲ್ಲಿ ನಮಾಜ್ ಮಾಡಿದರು. 
ರಾಜ್ಯ

ಅಧಿಕಾರಕ್ಕಾಗಿ ಧರ್ಮವನ್ನು ವಿಭಜಿಸುವವರು ದೊಡ್ಡ ದೇಶದ್ರೋಹಿಗಳು: ಸಾಹಿತಿ ಕೆ. ಮರುಳಸಿದ್ದಪ್ಪ

ಅಧಿಕಾರಕ್ಕಾಗಿ ಧರ್ಮವನ್ನು ವಿಭಜಿಸುವವರು ದೊಡ್ಡ ದೇಶದ್ರೋಹಿಗಳು ಎಂದು ಸಾಹಿತಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ ಮರುಳಸಿದ್ದಪ್ಪ ಅವರು ಶನಿವಾರ ಹೇಳಿದರು.

ಬೆಂಗಳೂರು: ಅಧಿಕಾರಕ್ಕಾಗಿ ಧರ್ಮವನ್ನು ವಿಭಜಿಸುವವರು ದೊಡ್ಡ ದೇಶದ್ರೋಹಿಗಳು ಎಂದು ಸಾಹಿತಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ ಮರುಳಸಿದ್ದಪ್ಪ ಅವರು ಶನಿವಾರ ಹೇಳಿದರು.

ಬನ್ನೇರುಘಟ್ಟ ರಸ್ತೆಯ ಬಿಲಾಲ್ ಮಸೀದಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಒಗ್ಗಟ್ಟು ಮೂಡಿಸಲು ಮತ್ತು ಸಮುದಾಯದ ಬಗ್ಗೆ ಇರುವ ಭಿನ್ನಾಭಿಪ್ರಾಯ ಮತ್ತು ತಪ್ಪು ಕಲ್ಪನೆಗಳನ್ನು ನಿವಾರಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮರುಳಸಿದ್ದಪ್ಪ ಅವರು ಭಾಗವಹಿಸಿ ಮಾತನಾಡಿದರು.

ಈ ಕಾರ್ಯಕ್ರಮವು ಪರಸ್ಪರ ಧರ್ಮದ ಬಗ್ಗೆ ತಿಳಿದುಕೊಳ್ಳಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಇತರ ಸಮುದಾಯಗಳ ಧಾರ್ಮಿಕ ಸ್ಥಳಗಳನ್ನು ಒಳಗೊಂಡ ಇಂತಹ ಕಾರ್ಯಕ್ರಮಗಳು ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮತ್ತು ಐಕ್ಯತೆ ಮೂಡಿಸಲು ವಿಚಾರ ವಿನಿಮಯ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ನಮ್ಮದು ಎಲ್ಲರನ್ನೂ ಒಳಗೊಳ್ಳುವ ಸಂಸ್ಕೃತಿಯಾಗಿದ್ದು, ರಾಜಕೀಯ ಪಕ್ಷಗಳು ಹಾಗೂ ಕೆಲವು ಧಾರ್ಮಿಕ ಮುಖಂಡರು ಮಾಲಿನ್ಯ, ಗದ್ದಲ ಮತ್ತು ಅಸ್ಥಿರ ಪರಿಸ್ಥಿತಿಗಳನ್ನು ಸೃಷ್ಟಿಸುತ್ತಾರೆ. ನಮ್ಮ ಸಂವಿಧಾನ ಏಕತೆಯ ಬಗ್ಗೆ ಹೇಳುತ್ತದೆ. ಆದರೆ, ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ಭಾವನಾತ್ಮಕ ಮತ್ತು ಧಾರ್ಮಿಕ ವಿಚಾರಗಳನ್ನು ಬಳಸಿಕೊಳ್ಳುತ್ತವೆ. ಪಕ್ಷಗಳು ಅಧಿಕಾರ ಹಿಡಿಯಲು ಜನರನ್ನು ಮತ್ತು ಸಮುದಾಯಗಳನ್ನು ಒಡೆಯಬಾರದು. ಬದಲಾಗಿ ಅಭಿವೃದ್ಧಿಯ ಬಗ್ಗೆ ಮಾತನಾಡಬೇಕು. ಜನರ ನಡುವೆ ಒಡಕು ಮೂಡಿಸುವವರೇ ದೊಡ್ಡ ದೇಶದ್ರೋಹಿಗಳು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT