ವಸತಿ ಶಾಲೆಗಳಲ್ಲಿ ಬದಲಾದ ಘೋಷವಾಕ್ಯ 
ರಾಜ್ಯ

ವಸತಿ ಶಾಲೆಗಳಲ್ಲಿ ಘೋಷವಾಕ್ಯ ತೆಗೆದುಹಾಕುವ ಯಾವುದೇ ಆದೇಶ ಹೊರಡಿಸಿಲ್ಲ: ಸಚಿವ ಮಹಾದೇವಪ್ಪ ಸ್ಪಷ್ಟನೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಘೋಷವಾಕ್ಯ ಬದಲಾವಣೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ ಸರ್ಕಾರ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ ಯಾವುದೇ ಆದೇಶ ನೀಡಿಲ್ಲ ಎಂದು ಸಚಿವ ಮಹಾದೇವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳಲ್ಲಿ ಕಲಿಕೆಯ ದೃಷ್ಟಿಯಿಂದ ವೈಜ್ಞಾನಿಕತೆ, ವೈಚಾರಿಕತೆ ಮೂಡಿಸಲು ಜೊತೆಗೆ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸಲಾಗಿದೆ. ಕೆಲವರು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ ಎಂಬ ಆಲೋಚನೆ ಮುಂದಿಟ್ಟಿದ್ದಾರೆ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ದೈರ್ಯವಾಗಿ ಪ್ರಶ್ನಿಸಿ ಎಂದರೆ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯ. ಕುವೆಂಪು ಅವರಿಗೆ ಅವಮಾನ ಮಾಡುವ ಎಸಗುವ ಯಾವುದೇ ಪ್ರಮಾದ ಇಲ್ಲಿ ಜರುಗಿರುವುದಿಲ್ಲ ಎಂದು ಹೇಳಿದ್ದಾರೆ.

ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು, ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!