ಟಿಪ್ಪು ಸುಲ್ತಾನ್ ಸಾಂದರ್ಭಿಕ ಚಿತ್ರ 
ರಾಜ್ಯ

ಟಿಪ್ಪು ಸುಲ್ತಾನ್ ಬ್ಯಾನರ್ ತೆರವಿಗೆ ಪೊಲೀಸ್ ನೋಟಿಸ್‌, ಡಿವೈಎಫ್‌ಐ ವಿರೋಧ

ತೊಕ್ಕೊಟ್ಟಿನಲ್ಲಿ ಫೆ.25ರಿಂದ ನಡೆಯಲಿರುವ ಕರ್ನಾಟಕ ರಾಜ್ಯ ಸಮ್ಮೇಳನದ ಅಂಗವಾಗಿ ಸ್ಥಳೀಯ ಕಚೇರಿಯಲ್ಲಿ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ತೆರವಿಗೆ ಡಿವೈಎಫ್‌ಐ ನಿರಾಕರಿಸಿದೆ.

ಮಂಗಳೂರು: ಇಲ್ಲಿನ ತೊಕ್ಕೊಟ್ಟಿನಲ್ಲಿ ಫೆ.25ರಿಂದ ನಡೆಯಲಿರುವ ಕರ್ನಾಟಕ ರಾಜ್ಯ ಸಮ್ಮೇಳನದ ಅಂಗವಾಗಿ ಸ್ಥಳೀಯ ಕಚೇರಿಯಲ್ಲಿ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ತೆರವಿಗೆ ಡಿವೈಎಫ್‌ಐ ನಿರಾಕರಿಸಿದೆ.

ಸಾರ್ವನಿಕ ಸ್ಥಳದಲ್ಲಿ ಬ್ಯಾನರ್ ಹಾಕಲು ಸಂಘಟನೆಯು ಪೂರ್ವಾನುಮತಿ ಪಡೆದಿಲ್ಲದ ಕಾರಣ ಕಚೇರಿ ಬಳಿ ಹಾಕಿರುವ ಟಿಪ್ಪು ಸುಲ್ತಾನ್ ಕಟೌಟ್ ತೆರವು ಮಾಡುವಂತೆ ಕೊಣಾಜೆ ಪೊಲೀಸ್ ಠಾಣಾ ನಿರೀಕ್ಷಕರು ಭಾರತ ಪ್ರಜಾಸತ್ತಾತ್ಮಕ ಯುವ ಒಕ್ಕೂಟದ (ಡಿವೈಎಫ್‌ಐ) ಹರೇಕಳ ಘಟಕದ ಅಧ್ಯಕ್ಷರಿಗೆ ಭಾನುವಾರ ನೋಟಿಸ್ ನೀಡಿದ್ದು, ಸಮಸ್ಯೆ ತಪ್ಪಿಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಬ್ಯಾನರ್ ತೆರವಿಗೆ ಪೊಲೀಸರು ಮನವಿ ಮಾಡಿದ್ದಾರೆ.

ಆದರೆ ರಾಜ್ಯ ಸಮ್ಮೇಳನದ ಅಂಗವಾಗಿ ಸಮಾಜ ಸುಧಾರಕರು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರರ ಕಟೌಟ್, ಫ್ಲೆಕ್ಸ್ ಬ್ಯಾನರ್ ಹಾಕುತ್ತಿದ್ದು, ಬ್ಯಾನರ್ ಹಾಕುವ ಹಕ್ಕು ಸರ್ಕಾರಕ್ಕೆ ಇಲ್ಲ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಜ್ ಹೇಳಿದ್ದಾರೆ. ರಾಜ್ಯದಲ್ಲಿ ಸರಕಾರ ಬದಲಾದರೂ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಸಂಘ ಮನೋಭಾವನೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯ ಸಮ್ಮೇಳನದ ಅಂಗವಾಗಿ ವಿವಿಧ ಸ್ಥಳಗಳಲ್ಲಿ ಹಾಕಲಾಗಿರುವ ಟಿಪ್ಪು, ರಾಣಿ ಅಬ್ಬಕ್ಕ, ಕೋಟಿ-ಚೆನಯ್ಯ ಮತ್ತು ಇತರರ ಕಟೌಟ್‌ಗಳನ್ನು ಡಿವೈಎಫ್‌ಐ ಕಾರ್ಯಕರ್ತರು ರಕ್ಷಿಸಲಿದ್ದಾರೆ ಎಂದು ಇಮ್ತಿಯಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT