ಸಾಂದರ್ಭಿಕ ಚಿತ್ರ 
ರಾಜ್ಯ

ಹೆತ್ತವರಿಗೆ ಹೇಳದೆ ಬಾಲಕಿಗೆ ಬಾಲ್ಯ ವಿವಾಹ; ಓರ್ವನ ಬಂಧನ

25 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಆಕೆಯ ಪೋಷಕರಿಗೆ ಹೇಳದೆ ಸಂಬಂಧಿಕರು ಮದುವೆ ಮಾಡಿಸಿರುವ ಘಟನೆಯೊಂದು ನಗರದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: 25 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಆಕೆಯ ಪೋಷಕರಿಗೆ ಹೇಳದೆ ಸಂಬಂಧಿಕರು ಮದುವೆ ಮಾಡಿಸಿರುವ ಘಟನೆಯೊಂದು ನಗರದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ.

“ಫೆ.15 ರಂದು 25 ವರ್ಷದ ಯುವಕನೊಂದಿಗೆ ಬಾಲಕಿಗೆ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ ಇವರೆಲ್ಲ ಸೇರಿ ತಂದೆ-ತಾಯಿಯಾಗಿರುವ ನಮಗೆ ಗೊತ್ತೇ ಇಲ್ಲದೆ ಮದುವೆ ಮಾಡಿಸಿದ್ದಾರೆ. ಮಗಳು ಇನ್ನೂ ಅಪ್ರಾಪ್ತೆಯಾಗಿದ್ದಾಳೆ. ನನ್ನ ಮಗಳನ್ನು ಪುಸಲಾಯಿಸಿ ಮದುವೆ ಮಾಡಿಸಿದ್ದಾರೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಮದುವೆ ಮಾಡಲಾಗಿದೆ” ಎಂದು ಬಾಲಕಿ ತಾಯಿ ಸರ್ಜಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ನನ್ನ ಮಗಳು ಎಂಟನೇ ತರಗತಿಯಲ್ಲಿ ಓದುತ್ತಿದ್ದಾಳೆ. ಬಾಲಕಿಯನ್ನು ದೊಡ್ಡಪ್ಪ ದೊಡ್ಡಮ್ಮ ಪುಸಲಾಯಿಸಿ ವಿವಾಹ ಮಾಡಿಸಿದ್ದಾರೆಂದು ದೂರಿನಲ್ಲಿ ಹೇಳಿದ್ದಾರೆ.

ಬಾಲಕಿಯ ತಂದೆ ದಿನಗೂಲಿ ಕಾರ್ಮಿಕನಾಗಿದ್ದು, ಕುಡಿತದ ಚಟಕ್ಕೆ ಬಿದ್ದು ಕೆಲಸ ಬಿಟ್ಟಿದ್ದ. ನಂತರ ಮನೆ ನಿಭಾಯಿಸು ಬಾಲಕಿಯ ತಾಯಿ ಚಹಾ ಅಂಗಡಿ ತೆರೆದಿದ್ದರು. ನಂತರ ಮಗಳನ್ನು ಅಜ್ಜಿಯ ಮನೆಗೆ ಕಳುಹಿಸಿದ್ದರು.

ಮನೆಯಲ್ಲಿದ್ದ ಬಾಲಕಿಗೆ ಆಕೆಯ ಅಜ್ಜಿ ಹಾಗೂ ದೊಡ್ಡಪ್ಪ ಮದುವೆ ಮಾಡಿಸಿದ್ದಾರೆ. ಮದುವೆಯಾದ ದಿನ ಬಾಲಕಿ ತಾಯಿ ಮನೆಗೆ ಹೋಗಿದ್ದು, ಈ ವೇಳೆ ಬಾಲಕಿಯ ಕುತ್ತಿಗೆಯಲ್ಲಿ ಮಂಗಳಸೂತ್ರ ಇರುವುದನ್ನು ನೋಡಿದ್ದಾರೆ. ಬಾಲಕಿಯನ್ನು ವಿಚಾರಿಸಿದಾಗ ನಡೆದ ವಿಚಾರವನ್ನು ಬಾಲಕಿ ಹೇಳಿಕೊಂಡಿದ್ದಾಳೆ. ಬಳಿಕ ಬಾಲಕಿಯ ತಾಯಿ ಠಾಣೆ ಮೆಟ್ಟಿಲೇರಿ ವಿವಾದ ಯುವಕನ ಕುಟುಂಬ ಹಾಗೂ ಬಾಲಕಿಯ ದೊಡ್ಡಪ್ಪ ಹಾಗೂ ಅಜ್ಜಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಸರ್ಜಾಪುರ ಪೊಲೀಸರು ಪೋಕ್ಸೋ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ. 63 ವರ್ಷದ ಬಾಲಕಿಯ ಅಜ್ಜಿ ತಲೆಮರೆಸಿಕೊಂಡಿದ್ದು, ಹುಡುಕಾಟ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT