ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಶಾಲಾ ಬಾಲಕಿಗೆ ಕಿರುಕುಳ ನೀಡಿದ ಯುವಕ ಜೈಲಿಗೆ!

ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನೂ ಉನ್ನತ ನ್ಯಾಯಾಲಯ ರದ್ದುಗೊಳಿಸಿದೆ.

ಬೆಂಗಳೂರು: ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನೂ ಉನ್ನತ ನ್ಯಾಯಾಲಯ ರದ್ದುಗೊಳಿಸಿದೆ. ಪ್ರಾಸಿಕ್ಯೂಷನ್‌ನ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ಇತ್ತೀಚೆಗೆ ಈ ಆದೇಶ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014ರ ಅಕ್ಟೋಬರ್ 26ರಂದು ಈ ಘಟನೆ ನಡೆದಿತ್ತು.

ಅಪರಾಧ ಎಸಗಿದಾಗ ಆರೋಪಿಗೆ 18 ವರ್ಷ ವಯಸ್ಸಾಗಿತ್ತು ಮತ್ತು ಪ್ರಸ್ತುತ ಆತನಿಗೆ 28 ವರ್ಷ. ಅಪರಾಧಿಗಳ ಪರಿವೀಕ್ಷಣಾ ಕಾಯ್ದೆಯಡಿ ಪ್ರಯೋಜನ ನೀಡಿ ಅವರನ್ನು ಬಿಡುಗಡೆ ಮಾಡಬೇಕೆಂಬ ಮನವಿಯನ್ನು ನ್ಯಾಯಾಲಯ ನಿರಾಕರಿಸಿತು. ಜೂನ್ 20, 2012 ರಂದು ಪೋಕ್ಸೋ ಕಾಯ್ದೆ ಜಾರಿಯಾಗಿರುವುದಾಗಿ ಹೇಳಿದ ನ್ಯಾಯಾಲಯ, ಅಪರಾಧಿಗಳ ಪರಿವೀಕ್ಷಣಾ ಕಾಯ್ದೆಯ ಪ್ರಯೋಜನವನ್ನು ಆರೋಪಿಗಳಿಗೆ ವಿಸ್ತರಿಸಲಾಗುವುದಿಲ್ಲ ಎಂದು ಹೇಳಿತು.

ಕಾಫಿ ಎಸ್ಟೇಟ್‌ನಲ್ಲಿ ಕಾರ್ಮಿಕನಾಗಿದ್ದ ಆರೋಪಿ, ಸಂತ್ರಸ್ತೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬಲವಂತವಾಗಿ ಹಿಡಿದು ಸಾರ್ವಜನಿಕ ಶೌಚಾಲಯಕ್ಕೆ ಎಳೆದೊಯ್ದು, ಮುತ್ತು ಕೊಟ್ಟೆ ಎಂದು ಹೇಳಿದ್ದ. ಸಂತ್ರಸ್ತೆ ಹೇಗೋ ಆರೋಪಿಯ ಹಿಡಿತದಿಂದ ತಪ್ಪಿಸಿಕೊಂಡು ತನ್ನ ಮನೆ ತಲುಪಿದ್ದಳು.ಈ ಸಂಬಂಧ ಸಂತ್ರಸ್ತೆಯ ತಂದೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಚಿಕ್ಕಮಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ತಂದೆ-ತಾಯಿಯ ಹೇಳಿಕೆ ವ್ಯತಿರಿಕ್ತವಾಗಿದೆ. ಸಂತ್ರಸ್ತೆಯ ಸಾಕ್ಷ್ಯಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿ, ಆರೋಪಿಯನ್ನು ಖುಲಾಸೆಗೊಳಿಸಿತ್ತು.

ಆದರೆ, ಪೊಲೀಸರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಪಿ. ಯಶೋಧಾ, ಸಂತ್ರಸ್ತೆ ಆಕೆಯ ಪೋಷಕರು ಮತ್ತು ಇತರರು ನೀಡಿದ ಸಾಕ್ಷ್ಯದಿಂದ ಅಪರಾಧ ಸಾಬೀತಾಗಿದೆ ಎಂದು ವಾದಿಸಿದರು. ತನ್ನ ಮೇಲಿನ ಲೈಂಗಿಕ ಕಿರುಕುಳದ ಕುರಿತು ನ್ಯಾಯಾಲಯದ ಮುಂದೆ ಸಂತ್ರಸ್ತೆ ನೀಡಿದ ಹೇಳಿಕೆಯನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಅವರು ಸಮರ್ಥಿಸಿಕೊಂಡರು.ಸಂತ್ರಸ್ತೆಯ ಸಹಾಯಕ್ಕೆ ಯಾರೂ ಬಾರದ ಕಾರಣ, ಲೈಂಗಿಕ ಕಿರುಕುಳದ ಘಟನೆಯನ್ನು ತಳ್ಳಿಹಾಕುವಂತಿಲ್ಲ ಎಂದು ನ್ಯಾಯ ಪೀಠ ಹೇಳಿದೆ. ಘಟನೆ ನಡೆದ ಸುತ್ತಮುತ್ತ ಯಾವುದೇ ಮನೆಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT