ಬಾವಿ ಮುಚ್ಚುತ್ತಿರುವ ಅಧಿಕಾರಿಗಳು 
ರಾಜ್ಯ

ಬಾವಿ ತೋಡುತ್ತಿದ್ದ ಗೌರಿ ಕಾರ್ಯ ಶ್ಲಾಘಿಸಿದ ಸಚಿವ ಮಂಕಾಳ ವೈದ್ಯ: ಆದರೂ ಬಾವಿ ಮುಚ್ಚಿದ ಅಧಿಕಾರಿಗಳು

ನೀರಿನ ಕೊರತೆ ನೀಗಿಸಲು ಅಂಗನವಾಡಿ ಶಾಲೆಯಲ್ಲಿ ಏಕಾಂಗಿಯಾಗಿ ಬಾವಿ ತೋಡಿ ಸುದ್ದಿಯಾಗಿದ್ದ ಗೌರಿ ನಾಯ್ಕ (53) ಅವರನ್ನು ಜಿಲ್ಲಾ ಸಚಿವ ಮಂಕಾಳ್ ವೈದ್ಯ ಭೇಟಿ ಮಾಡಿದರು.

ಸಿರಸಿ: ನೀರಿನ ಕೊರತೆ ನೀಗಿಸಲು ಅಂಗನವಾಡಿ ಶಾಲೆಯಲ್ಲಿ ಏಕಾಂಗಿಯಾಗಿ ಬಾವಿ ತೋಡಿ ಸುದ್ದಿಯಾಗಿದ್ದ ಗೌರಿ ನಾಯ್ಕ (53) ಅವರನ್ನು ಜಿಲ್ಲಾ ಸಚಿವ ಮಂಕಾಳ್ ವೈದ್ಯ ಭೇಟಿ ಮಾಡಿದರು.

ಆದರೆ ಮರುದಿನವೇ ಶಿರಸಿ ತಾಲೂಕು ಆಡಳಿತದ ಅಧಿಕಾರಿಗಳು ಶಾಲೆಗೆ ಇಳಿದು ಬಾವಿಯನ್ನು ಮುಚ್ಚಿಸಿದ್ದಾರೆ. ಈ ಶಾಲೆಯು ಶಿರಸಿಯ ಹೊರವಲಯದಲ್ಲಿರುವ ಗಣೇಶ ನಗರದಲ್ಲಿದೆ.

ಗೌರಿ ಅವರನ್ನು ಭೇಟಿ ಮಾಡಲು ಸಚಿವ ಮಂಕಾಳ ವೈದ್ಯ ಗ್ರಾಮಕ್ಕೆ ಭೇಟಿ ನೀಡಿದ್ದರು. ಅವರನ್ನು ಭೇಟಿ ಮಾಡಿದ ನಂತರ ಆಕೆಯ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ನನ್ನ ಜಿಲ್ಲೆಯಲ್ಲಿ ಅಂಗನವಾಡಿ ಶಾಲೆಗಳಲ್ಲಿ ನೀರಿಲ್ಲ. ನಾನು ಸಾಕಷ್ಟು ನೀರಿನ ಪೂರೈಕೆ ಮಾಡಿದ್ದೇನೆ, ಆಕೆ ಒಳ್ಳೆಯ ಕೆಲಸ ಮಾಡಿದ್ದಾರೆ.

ಮಹಿಳೆಯರು ಕೂಡ ಬಾವಿ ತೋಡಬಲ್ಲರು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅದನ್ನು ನಿಲ್ಲಿಸುವಂತೆ ನಾನು ಅವಳನ್ನು ವಿನಂತಿಸುತ್ತೇನೆ ಎಂದು ಗೌರಿ ನಾಯ್ಕ ಅವರನ್ನು ಅಭಿನಂದಿಸಿದ ನಂತರ ಹೇಳಿದರು. ನಾನು ಬಾವಿ ತೋಡುವ ಕೆಲಸವನ್ನು ಪೂರ್ಣಗೊಳಿಸುತ್ತೇನೆ, ಸರ್ಕಾರ ಏನು ಬೇಕೋ ಅದನ್ನು ಮಾಡಲಿ ಎಂದು ಗೌರಿ ನಾಯ್ಕ್ ತಿಳಿಸಿದ್ದಾರೆ.

ಸಚಿವ ಮಂಕಾಳು ವೈದ್ಯ ಬಂದು ನಂಗೆ ಶಾಲು ಹಾರ ಹಾಕಿದ್ರು. ಇದೆಲ್ಲ ನಂಗೆ ಬೇಡ ಬಾವಿ ತೆಗೆಯಲು ಬಿಡಿ ಅಂತಾ ಹೇಳಿದೆ. ಅಜ್ಜಿ ನಿಮಗೆ ಕಷ್ಟ ಆಗುತ್ತೆ ಬೇಡ ಇಲ್ಲಿಗೆ ನಿಲ್ಲಿಸಿ ಅಂದ್ರು. ನನಗೆ ಯಾವುದೇ ಕಷ್ಟ ಆಗುವುದಿಲ್ಲ, ಅವಕಾಶ ಕೊಡಿ. ನೀರು ಬಂದ ಬಳಿಕ ನಿಮಗೆ ಬಾವಿ ಕೊಡುತ್ತೇನೆ. ನೀವು ಎನ್ ಮಾಡುವುದು ಇದೇ ಅದನ್ನ ಮಾಡಿಕೊಳ್ಳಿ. ಆದ್ರೆ ನೀರು ಬರುವವರೆಗೂ ನಂಗೆ ಬಿಟ್ಟ ಬಿಡಿ ಎಂದು ಹೇಳಿದ್ದೆ. ಆದ್ರೆ ನಿನ್ನೆ ಒಮ್ಮಿಂದ ಒಮ್ಮೆಲೆ ಬಂದು ಅಧಿಕಾರಿಗಳು ಹಲಗೆಯಿಂದ ಮುಚ್ಚಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT