ಬಿಬಿಎಂಪಿ ಕಚೇರಿ 
ರಾಜ್ಯ

ಮಾರ್ಗಸೂಚಿ ದರದಂತೆ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ಮುಂದು!

ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ನಿವೇಶನ, ಕಟ್ಟಡ, ವಾಣಿಜ್ಯ ಹಾಗೂ ಇತರೆ ಬಳಕೆಗೆ ಆಸ್ತಿ ತೆರಿಗೆಯ ಪ್ರಮಾಣವನ್ನು ನಿಗದಿ ಮಾಡಿ, ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಬೆಂಗಳೂರು: ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ನಿವೇಶನ, ಕಟ್ಟಡ, ವಾಣಿಜ್ಯ ಹಾಗೂ ಇತರೆ ಬಳಕೆಗೆ ಆಸ್ತಿ ತೆರಿಗೆಯ ಪ್ರಮಾಣವನ್ನು ನಿಗದಿ ಮಾಡಿ, ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ವಸತಿ ನಿವೇಶನ, ಭೂಮಿ ಮತ್ತು ವಸತಿ ಖಾಲಿ ಪ್ರದೇಶಗಳನ್ನು ಎರಡು ವರ್ಗಗಳಾಗಿ ವಿಂಗಡಿಸಲಾಗಿದೆ. ಅಪಾರ್ಟ್ ಮೆಂಟ್,ಫ್ಲ್ಯಾಂಟ್ ಸೇರಿದಂತೆ ಭೂಮಿ,ನಿವೇಶನಗಳನ್ನು ಬಾಡಿಗೆಗೆ ನೀಡಿದ್ದರೆ, ವರ್ಷಕ್ಕೆ ಪ್ರತಿ ಅಡಿಗೆ ಕರ್ನಾಟಕ ಸ್ಟ್ಯಾಂಪ್ ಕಾಯ್ದೆಯಲ್ಲಿ ನಮೂದಾಗಿರುವ ಮಾರ್ಗಸೂಚಿ ದರ ಶೇ. 0.2 ರಷ್ಟು ಆಸ್ತಿ ತೆರಿಗೆ ಪಾವತಿಸಬೇಕು.ಇದೇ ರೀತಿಯ ಸ್ವತ್ತು ಮಾಲೀಕರೇ ಉಪಯೋಗಿಸುತ್ತಿದ್ದರೆ ಮಾರ್ಗಸೂಚಿ ದರದ ಶೇ0.1 ರಷ್ಟು ತೆರಿಗೆ ಅನ್ವಯವಾಗಲಿದೆ. ಆಸ್ತಿ ಸಂಪೂರ್ಣ ಖಾಲಿ ಪ್ರದೇಶವಾಗಿದ್ದರೆ ಶೇ.0.0.25 ರಷ್ಟು ತೆರಿಗೆ ವಿಧಿಸಬೇಕು.

ವಸತಿಯೇತರ ಭೂಮಿ, ನಿವೇಶನ ಮತ್ತು ಖಾಲಿ ನಿವೇಶನಗಳಿಗೆ ಕೂಡಾ ಎರಡು ವರ್ಗವಾಗಿಸಿ, ನಿವೇಶನ ಬಾಡಿಗೆ ನೀಡಿದರೆ, ಪ್ರತಿ ಚದರ ಅಡಿಗೆ ಮಾರ್ಗಸೂಚಿ ದರದಲ್ಲಿ ಶೇ. 0.5 ರಷ್ಟು, ಸ್ವಂತ ಬಳಕೆಯಲ್ಲಿದ್ದರೆ ಶೇ. 0.25 ರಷ್ಟು, ಕಟ್ಟಡಕ್ಕೆ ಶೇ. 0.5 ರಷ್ಟು ತೆರಿಗೆ ನಿಗದಿ ಮಾಡಲಾಗಿದೆ.

ನಾಗರಿಕರು ಆಕ್ಷೇಪಣೆ ಗಳಿದ್ದರೆ 15ದಿನಗಳೊಳಗೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಲ್ಲಿಸಬಹುದು. spcommrev@bbmp. gov. in ಗೆ ಇಮೇಲ್ ಮಾಡಬಹುದು ಎಂದು ಕರಡು ಅಧಿಸೂಚನೆಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT