ಬಿಬಿಎಂಪಿ ಕಚೇರಿ 
ರಾಜ್ಯ

ಮಾರ್ಗಸೂಚಿ ದರದಂತೆ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ಮುಂದು!

ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ನಿವೇಶನ, ಕಟ್ಟಡ, ವಾಣಿಜ್ಯ ಹಾಗೂ ಇತರೆ ಬಳಕೆಗೆ ಆಸ್ತಿ ತೆರಿಗೆಯ ಪ್ರಮಾಣವನ್ನು ನಿಗದಿ ಮಾಡಿ, ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಬೆಂಗಳೂರು: ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ನಿವೇಶನ, ಕಟ್ಟಡ, ವಾಣಿಜ್ಯ ಹಾಗೂ ಇತರೆ ಬಳಕೆಗೆ ಆಸ್ತಿ ತೆರಿಗೆಯ ಪ್ರಮಾಣವನ್ನು ನಿಗದಿ ಮಾಡಿ, ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ವಸತಿ ನಿವೇಶನ, ಭೂಮಿ ಮತ್ತು ವಸತಿ ಖಾಲಿ ಪ್ರದೇಶಗಳನ್ನು ಎರಡು ವರ್ಗಗಳಾಗಿ ವಿಂಗಡಿಸಲಾಗಿದೆ. ಅಪಾರ್ಟ್ ಮೆಂಟ್,ಫ್ಲ್ಯಾಂಟ್ ಸೇರಿದಂತೆ ಭೂಮಿ,ನಿವೇಶನಗಳನ್ನು ಬಾಡಿಗೆಗೆ ನೀಡಿದ್ದರೆ, ವರ್ಷಕ್ಕೆ ಪ್ರತಿ ಅಡಿಗೆ ಕರ್ನಾಟಕ ಸ್ಟ್ಯಾಂಪ್ ಕಾಯ್ದೆಯಲ್ಲಿ ನಮೂದಾಗಿರುವ ಮಾರ್ಗಸೂಚಿ ದರ ಶೇ. 0.2 ರಷ್ಟು ಆಸ್ತಿ ತೆರಿಗೆ ಪಾವತಿಸಬೇಕು.ಇದೇ ರೀತಿಯ ಸ್ವತ್ತು ಮಾಲೀಕರೇ ಉಪಯೋಗಿಸುತ್ತಿದ್ದರೆ ಮಾರ್ಗಸೂಚಿ ದರದ ಶೇ0.1 ರಷ್ಟು ತೆರಿಗೆ ಅನ್ವಯವಾಗಲಿದೆ. ಆಸ್ತಿ ಸಂಪೂರ್ಣ ಖಾಲಿ ಪ್ರದೇಶವಾಗಿದ್ದರೆ ಶೇ.0.0.25 ರಷ್ಟು ತೆರಿಗೆ ವಿಧಿಸಬೇಕು.

ವಸತಿಯೇತರ ಭೂಮಿ, ನಿವೇಶನ ಮತ್ತು ಖಾಲಿ ನಿವೇಶನಗಳಿಗೆ ಕೂಡಾ ಎರಡು ವರ್ಗವಾಗಿಸಿ, ನಿವೇಶನ ಬಾಡಿಗೆ ನೀಡಿದರೆ, ಪ್ರತಿ ಚದರ ಅಡಿಗೆ ಮಾರ್ಗಸೂಚಿ ದರದಲ್ಲಿ ಶೇ. 0.5 ರಷ್ಟು, ಸ್ವಂತ ಬಳಕೆಯಲ್ಲಿದ್ದರೆ ಶೇ. 0.25 ರಷ್ಟು, ಕಟ್ಟಡಕ್ಕೆ ಶೇ. 0.5 ರಷ್ಟು ತೆರಿಗೆ ನಿಗದಿ ಮಾಡಲಾಗಿದೆ.

ನಾಗರಿಕರು ಆಕ್ಷೇಪಣೆ ಗಳಿದ್ದರೆ 15ದಿನಗಳೊಳಗೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಲ್ಲಿಸಬಹುದು. spcommrev@bbmp. gov. in ಗೆ ಇಮೇಲ್ ಮಾಡಬಹುದು ಎಂದು ಕರಡು ಅಧಿಸೂಚನೆಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT