ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ತಾವು ರಾಗಿ ಮಾಲ್ಟ್ ಸೇವಿಸಿ ಮಕ್ಕಳಿಗೆ ನೀಡುವ ಮೂಲಕ ಚಾಲನೆ ನೀಡಿದರು.  
ರಾಜ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್: ಸಿಎಂ ಸಿದ್ದರಾಮಯ್ಯ ಚಾಲನೆ

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧಗ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಚಾಲನೆ ನೀಡಿದ್ದಾರೆ.

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸೌಧಗ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಚಾಲನೆ ನೀಡಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕೆಎಂಎಫ್ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ಸರ್ಕಾರಿ ಶಾಲಾ ಮಕ್ಕಳಿಗಾಗಿ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ.

ಕೆಎಂಎಫ್ ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ಕೆಎಂಎಪ್ ಗೆ ನೀಡುತ್ತದೆ. ಆ ಮೂಲಕ ಕೆಎಂಎಫ್ ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜೊತೆಗೆ ಕಳೆದ ಬಜೆಟ್​​ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ನೀಡುವ ಕಾರ್ಯಕ್ರಮ ಆರಂಭಿಸಿದೆವು ಎಂದರು.

ರಾಗಿ ಮಾಲ್ಟ್: ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳು ರಕ್ತಹೀನತೆ ಮತ್ತು ಪೌಷ್ಠಿಕಾಂಶ ಕೊರತೆಯಿಂದ ಬಳಲಬಾರದು ಎಂಬುದು ಇದರ ಉದ್ದೇಶ. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎಂದು ತಿಳಿಸಿದರು.

ಶಿಕ್ಷಣದಿಂದ ಸ್ವಾಭಿಮಾನ: ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್​​ಗಳೂ ಈಗ ಮೌಢ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಢ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಢ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಅಭಿಪ್ರಾಯಪಟ್ಟರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT