ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಚಿರತೆಗಾಗಿ ಅರಣ್ಯಾಧಿಕಾರಿಗಳ ಶೋಧ; ಕಾರ್ಯಾಚರಣೆಯಲ್ಲಿ ಸಿಕ್ಕಿದ್ದು ನಾಯಿ!

ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಚಿರತೆ ಕಾಣಿಸಿಕೊಂಡಿದೆ ಎಂದು ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರು. ನಂತರ ಚಿರತೆಗಾಗಿ ಶೋಧ ಕಾರ್ಯ ಆರಂಭಿಸಿದರು.

ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ.

ಫೆಬ್ರವರಿ 11 ರಂದು ತಮ್ಮ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಆರ್‌ಆರ್ ನಗರದ ನಿವಾಸಿಗಳು ಅರಣ್ಯ ಅಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರು. ಫೆಬ್ರವರಿ 19 ರಂದು ಮತ್ತೆ ಚಿರತೆ ಕಾಣಿಸಿಕೊಂಡಿದೆ ಎಂದು ಕರೆ ಮಾಡಲಾಗಿತ್ತು.

ಕೆಲವು ನಿವಾಸಿಗಳು ರಾತ್ರಿಯಿಡೀ ಜಾಗರಣೆ ಮಾಡಿದ್ದರೂ ಚಿರತೆ ಕಾಣಲಿಲ್ಲ. ಆದಾಗ್ಯೂ, ಪ್ರದೇಶದ ಅಪಾರ್ಟ್ಮೆಂಟ್ ಸಂಕೀರ್ಣಗಳ ನಿವಾಸಿಗಳು ಪ್ರಾಣಿಯೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ಆದರೆ ದೃಶ್ಯಾವಳಿಗಳು ಸ್ಪಷ್ಟವಾಗಿಲ್ಲ. ಚಿರತೆ ಎಂದು ಭಾವಿಸಿದ ನಿವಾಸಿಗಳು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಸಿಬ್ಬಂದಿಗಳು ಜಾಗದಲ್ಲಿ ಕೂಲಂಕುಷವಾಗಿ ಶೋಧಿಸಿದ ಬಳಿಕ ನಾಯಿ ಇರುವುದು ಪತ್ತೆಯಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT