ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ TNIE
ರಾಜ್ಯ

ಪ್ರಿಯಾಂಕ್ ಖರ್ಗೆ ಗೆ ರಾಜೀವ್ ಚಂದ್ರಶೇಖರ್ ಪತ್ರ: ರಾಜ್ಯದಲ್ಲಿ ಜಲ್ ಜೀವನ್ ಮಿಷನ್ ಜಾರಿಯ ಗತಿ ಬಗ್ಗೆ ಕಳವಳ

ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಕರ್ನಾಟಕ ಸಚಿವ ಐಟಿ/ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದು ರಾಜ್ಯದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಜಾರಿ ವೇಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಕರ್ನಾಟಕ ಸಚಿವ ಐಟಿ/ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದು ರಾಜ್ಯದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಜಾರಿ ವೇಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಮಿಷನ್ ನ್ನು ಪೂರ್ಣಗೊಳಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಕರ್ನಾಟಕದಲ್ಲಿ ಇತ್ತೀಚೆಗೆ ಜೆಜೆಎಂ ಯೋಜನೆ ಪ್ರಗತಿ ಪರಿಶೀಲನೆಯಲ್ಲಿ ರಾಜ್ಯ ಯೋಜಿತ ಕ್ರಿಯಾ ಯೋಜನೆಯಲ್ಲಿ ಹಿಂದುಳಿದಿದೆ ಎಂದು ಪತ್ರದಲ್ಲಿ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

"2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೆ ಶುದ್ಧ ಟ್ಯಾಪ್ ನೀರು ಪೂರೈಕೆಗಾಗಿ ನಿಮ್ಮ ರಾಜ್ಯದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ನ್ನು ಸಮಯಕ್ಕೆ ಅನುಗುಣವಾಗಿ ಅನುಷ್ಠಾನಗೊಳಿಸುವ ನಿಮ್ಮ ಬದ್ಧತೆಗೆ ಧನ್ಯವಾದ ಹೇಳಲು ನಾನು ಈ ಅವಕಾಶವನ್ನು ಬಳಸುತ್ತೇನೆ. JJM ತನ್ನ ಅಂತಿಮ ಹಂತದಲ್ಲಿರುವುದರಿಂದ, ಮಿಷನ್ ಅಡಿಯಲ್ಲಿ ಪ್ರಗತಿಯ ಆದ್ಯತೆಯ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ಉತ್ತಮವಾಗಿ ರೂಪಿಸಿದ ಕಾರ್ಯತಂತ್ರದ ಅಗತ್ಯವಿದೆ. ಕರ್ನಾಟಕ ರಾಜ್ಯದಲ್ಲಿನ ಜೆಜೆಎಂ ಪ್ರಗತಿಯ ಇತ್ತೀಚಿನ ಪರಿಶೀಲನೆ ರಾಜ್ಯ ಯೋಜಿತ ಕ್ರಿಯಾ ಯೋಜನೆಯಲ್ಲಿ ಹಿಂದುಳಿದಿದೆ ಎಂಬುದನ್ನು ಬಹಿರಂಗಪಡಿಸಿದೆ ಮತ್ತು ಸೂಕ್ತ ಮಟ್ಟದಲ್ಲಿ ಸಂಪೂರ್ಣ ಪರಿಶೀಲನೆ ಮತ್ತು ಸರಿಪಡಿಸುವ ಕ್ರಮಗಳ ಅಗತ್ಯವಿದೆ" ಎಂದು ಕೇಂದ್ರ ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಜಲ ಜೀವನ್ ಮಿಷನ್ ಪ್ರಾರಂಭದಲ್ಲಿ, ಕರ್ನಾಟಕದಲ್ಲಿ 24.51 ಲಕ್ಷ (ಶೇ. 24.23) ಗ್ರಾಮೀಣ ಕುಟುಂಬಗಳು ನಲ್ಲಿ ನೀರಿನ ಸಂಪರ್ಕವನ್ನು ಹೊಂದಿವೆ ಎಂದು ವರದಿಯಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. JJM ಅಡಿಯಲ್ಲಿ ಹೆಚ್ಚುವರಿ 49.96 ಲಕ್ಷ ಗ್ರಾಮೀಣ ಕುಟುಂಬಗಳಿಗೆ ಟ್ಯಾಪ್ ವಾಟರ್ ಸಂಪರ್ಕಗಳನ್ನು ಒದಗಿಸಲಾಗಿದೆ ಮತ್ತು ಫೆಬ್ರವರಿ 5, 2024 ರ ಹೊತ್ತಿಗೆ, ಕರ್ನಾಟಕದ 101.16 ಲಕ್ಷ ಗ್ರಾಮೀಣ ಕುಟುಂಬಗಳಲ್ಲಿ, ಸುಮಾರು 74.48 ಲಕ್ಷ (ಶೇ. 73.63) ಕುಟುಂಬಗಳು ನಲ್ಲಿ ನೀರಿನ ಸರಬರಾಜನ್ನು ಹೊಂದಿವೆ ಎಂದು ವರದಿಯಾಗಿದೆ, ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT