ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಲವ್ ಬ್ರೇಕಪ್; ಭಯೋತ್ಪಾದಕ ಎಂದು ಹೇಳಿ ವಿಮಾನದಿಂದ ಇಳಿದಿದ್ದ ವಿದ್ಯಾರ್ಥಿ ಬಂಧನ!

ತಾನು ಭಯೋತ್ಪಾದಕ ಸಂಘಟನೆಯ ಸದಸ್ಯ ಎಂದು ಬೆದರಿಕೆ ಹಾಕಿದ್ದ 21 ವರ್ಷದ ವಿದ್ಯಾರ್ಥಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ತಾನು ಭಯೋತ್ಪಾದಕ ಸಂಘಟನೆಯ ಸದಸ್ಯ, ಈ ವಿಮಾನ ಲಖನೌ ತಲುಪುವುದಿಲ್ಲ ಎಂದು ಬೆದರಿಕೆ ಹಾಕಿದ್ದ 21 ವರ್ಷದ ವಿದ್ಯಾರ್ಥಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಆದರ್ಶ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಲಕ್ನೋಗೆ ವಿಮಾನ ಹತ್ತಲು ಸಿಂಗ್ KIA ಗೆ ಬಂದಿದ್ದ. ಭದ್ರತಾ ತಪಾಸಣೆಯ ನಂತರ, ಆತ ಬೋರ್ಡಿಂಗ್ ಔಪಚಾರಿಕತೆಗಳನ್ನು ಸಹ ಪೂರ್ಣಗೊಳಿಸಿದ್ದ. ಆದರೆ ಕೊನೆಯ ಕ್ಷಣದಲ್ಲಿ ಪ್ರಯಾಣಿಸಲು ನಿರಾಕರಿಸಿ ಸ್ವಯಂಪ್ರೇರಣೆಯಿಂದ ವಿಮಾನದಿಂದ ಕೆಳಗಿಳಿದಿದ್ದ.

ಏರ್‌ಲೈನ್ ಸಿಬ್ಬಂದಿ ಈ ವಿಷಯವನ್ನು ಸಿಐಎಸ್‌ಎಫ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರ್ಶ್ ಕುಮಾರ್ ಸಿಂಗ್ ನನ್ನು ವಿಚಾರಣೆಗೆ ಕರೆದೊಯ್ದ ನಂತರ, ನಾನು ಭಯೋತ್ಪಾದಕ ಗುಂಪಿನಿಂದ ಬಂದಿದ್ದು ವಿಮಾನವು ಲಕ್ನೋವನ್ನು ತಲುಪುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ಹೇಳಿದ್ದ. ನಂತರ ಹೆಚ್ಚಿನ ವಿಚಾರಣೆಗಾಗಿ ಸಿಐಎಸ್ಎಫ್ ಅಧಿಕಾರಿಗಳು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಿಂಗ್ ನಗರದ ಹೊರವಲಯದಲ್ಲಿರುವ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ, ತನ್ನ ಗೆಳತಿ ತನ್ನೊಂದಿಗೆ ಲವ್ ಬ್ರೇಕ್ ಅಪ್ ಆಗಿದ್ದರಿಂದ ಅಸಮಾಧಾನಗೊಂಡಿದ್ದಾನೆ ಎಂದು ವರದಿಯಾಗಿದೆ. ಗೆಳತಿಯ ನೆನಪುಗಳೊಂದಿಗೆ ನಗರದಲ್ಲಿ ಇರಲು ಸಾಧ್ಯವಾಗದೆ, ಅವನು ತನ್ನ ಸ್ವಂತ ಊರಿಗೆ ಹೋಗಲು ನಿರ್ಧರಿಸಿದ್ದ ಎಂದು ತಿಳಿದು ಬಂದಿದೆ.

ಊರಿಗೆ ಹೋಗಲು ನಿರ್ಧರಿಸಿದ್ದ ಆತ ಕೊನೆ ಘಳಿಗೆಯಲ್ಲಿ ಮನಸ್ಸು ಬದಲಿಸಿ, ತನ್ನ ಓದು ಮುಂದುವರಿಸಲು ಬಯಸಿದ್ದ. ಆತನನ್ನು ಸಿಐಎಸ್‌ಎಫ್ ವಶಕ್ಕೆ ಪಡೆದ ನಂತರ ಆತ ತಾನು ಭಯೋತ್ಪಾದಕ ಎಂದು ಹೇಳಿಕೊಂಡಿದ್ದಾನೆ. ನಂತರ ತಾನು ಮಾಡಿದ ಅವಾಂತರಕ್ಕಾಗಿ ಕ್ಷಮೆಯಾಚಿಸಿದ್ದಾನೆ.

ಕೊನೆಯ ನಿಮಿಷದ ನಿರ್ಧಾರಕ್ಕೆ ಕಾರಣಗಳನ್ನು ವಿವರಿಸಿದ್ದಾನೆ ಎಂದು ತನಿಖೆಯ ಭಾಗದ ಅಧಿಕಾರಿಯೊಬ್ಬರು ಹೇಳಿದರು. ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಆತನ ಸಂಬಂಧ ಇದೆಯೇ ಎಂಬುದನ್ನು ತಿಳಿಯಲು ಪೊಲೀಸರು ಆತನ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ. ಕೆಐಎ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುದ್ಧದ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

Cricket Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ Arjun Tendulkar, ಯಾರು ಸಾನಿಯಾ ಚಂದೋಕ್? video

ಇರಾನ್‌ನೊಂದಿಗಿನ ಯುದ್ಧ: ಇಸ್ರೇಲ್‌ಗೆ ಭಾರಿ ಆರ್ಥಿಕ ನಷ್ಟ, ವಾರಕ್ಕೆ $ 3 ಬಿಲಿಯನ್ ವೆಚ್ಚ!

T20 ವಿಶ್ವಕಪ್ 2026: 'ಇದೊಂದು ನಮ್ಮ ನಿಯಂತ್ರಣದಲ್ಲಿಲ್ಲ..!': ಭಾರತ ಬೌಲಿಂಗ್ ಕೋಚ್ Morne Morkel ಆತಂಕ!

SCROLL FOR NEXT