ಸಚಿವ ಪ್ರಿಯಾಂಕ್ ಖರ್ಗೆ  
ರಾಜ್ಯ

ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗೆ ವಿದೇಶಾಂಗ ಇಲಾಖೆ ಸಂಪರ್ಕಿಸುತ್ತಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ

ಉದ್ಯೋಗಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕ ಮೂಲದ ಯುವಕರನ್ನು ಯುದ್ಧಕ್ಕೆ (Russia Ukrain War) ಬಳಸಿಕೊಂಡ ಆರೋಪ ಕೇಳಿಬಂದಿದೆ.

ಬೆಂಗಳೂರು: ಉದ್ಯೋಗಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕ ಮೂಲದ ಯುವಕರನ್ನು ಯುದ್ಧಕ್ಕೆ (Russia Ukrain War) ಬಳಸಿಕೊಂಡ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಜಿಲ್ಲಾಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ಇದೆ ಎಂದರು.

ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಷ್ಯಾ ಸೇನೆ ಅಮಾಯಕ ಯುವಕರನ್ನು ಯುದ್ಧಕ್ಕೆ ಬಳಸಿದ ಮಾಹಿತಿ ಇದೆ. ರಷ್ಯಾದಲ್ಲಿ ನಮ್ಮ ಯುವಕರನ್ನು ಸೇನೆಗೆ ಬಳಸಿಕೊಂಡ ಮಾಹಿತಿಯನ್ನು ನಮ್ಮ ಜಿಲ್ಲಾಧಿಕಾರಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ನೀಡಿದ್ದಾರೆ ಎಂದರು.

ಉದ್ಯೋಗಕ್ಕಾಗಿ ತೆರಳಿದ್ದ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡ ಮಾಹಿತಿ ಇದೆ. ರಷ್ಯಾದ ವ್ಯಾಗ್ನರ್​​ ಗ್ರೂಪ್​ಗೆ ಸೇರ್ಪಡೆ ಮಾಡಿಕೊಂಡ ಮಾಹಿತಿ ಇದೆ. ಕರ್ನಾಟಕ ಮಾತ್ರವಲ್ಲದೆ, ತೆಲಂಗಾಣ, ಉತ್ತರ ಭಾರತದ ಯುವಕರು ಸಿಲುಕಿರುವ ಮಾಹಿತಿ ಇದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಮನಕ್ಕೆ ತಂದಿದ್ದು, ವಿದೇಶಾಂಗ ಸಚಿವರ ಜೊತೆ ಮಾತನಾಡುವಂತೆ ಮನವಿ ಮಾಡಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!