ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಡೆ ಭೀಕರ ಅಪಘಾತ ಸಂಭವಿಸಿದ್ದು, ಇಂದು ಸಂಜೆ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಡೆ ಭೀಕರ ಅಪಘಾತ ಸಂಭವಿಸಿದ್ದು, ಇಂದು ಸಂಜೆ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆ ಬಳಿ ನಡೆದಿದೆ.

ಇಂದು ಸಂಜೆ ಜತ್ತ-ಜಾಂಬೋಟಿ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು, ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಮರಕ್ಕೆ ಡಿಕ್ಕಿ ಹೊಡೆದಿದೆ.

ಮೃತರನ್ನು ಗುರ್ಲಾಪುರದ ನಿವಾಸಿಗಳಾದ ಮಲ್ಲಿಕಾರ್ಜುನ್ ಮರಾಠೆ(16), ಲಕ್ಷ್ಮೀ ಮರಾಠೆ(19), ಆಕಾಶ ಮರಾಠೆ(14), ನಿಪನಾಳ ಗ್ರಾಮದ ಶ್ರೀಕಾಂತ ಪಡತರಿ(22), ಮುಗಳಖೋಡ ಗ್ರಾಮದ ನಾಗಪ್ಪ ಯಡವನ್ನವರ್(48) ಎಂದು ಗುರುತಿಸಲಾಗಿದೆ.

ಗುರ್ಲಾಪುರ ಕಡೆಯಿಂದ ಮುಗಳಖೋಡದತ್ತ ಹೊರಟಿದ್ದ ಕಾರು ಮೊದಲು ಬೈಕ್‌ಗೆ ಗುದ್ದಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ದುರಂತದಲ್ಲಿ ಬೈಕ್ ಸವಾರರು ಸೇರಿ ಐವರು ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಒಂದೇ ಕುಟುಂಬದವರಾಗಿದ್ದಾರೆ.

ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT