ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಡೆ ಭೀಕರ ಅಪಘಾತ ಸಂಭವಿಸಿದ್ದು, ಇಂದು ಸಂಜೆ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಡೆ ಭೀಕರ ಅಪಘಾತ ಸಂಭವಿಸಿದ್ದು, ಇಂದು ಸಂಜೆ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆ ಬಳಿ ನಡೆದಿದೆ.

ಇಂದು ಸಂಜೆ ಜತ್ತ-ಜಾಂಬೋಟಿ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು, ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಮರಕ್ಕೆ ಡಿಕ್ಕಿ ಹೊಡೆದಿದೆ.

ಮೃತರನ್ನು ಗುರ್ಲಾಪುರದ ನಿವಾಸಿಗಳಾದ ಮಲ್ಲಿಕಾರ್ಜುನ್ ಮರಾಠೆ(16), ಲಕ್ಷ್ಮೀ ಮರಾಠೆ(19), ಆಕಾಶ ಮರಾಠೆ(14), ನಿಪನಾಳ ಗ್ರಾಮದ ಶ್ರೀಕಾಂತ ಪಡತರಿ(22), ಮುಗಳಖೋಡ ಗ್ರಾಮದ ನಾಗಪ್ಪ ಯಡವನ್ನವರ್(48) ಎಂದು ಗುರುತಿಸಲಾಗಿದೆ.

ಗುರ್ಲಾಪುರ ಕಡೆಯಿಂದ ಮುಗಳಖೋಡದತ್ತ ಹೊರಟಿದ್ದ ಕಾರು ಮೊದಲು ಬೈಕ್‌ಗೆ ಗುದ್ದಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ದುರಂತದಲ್ಲಿ ಬೈಕ್ ಸವಾರರು ಸೇರಿ ಐವರು ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಒಂದೇ ಕುಟುಂಬದವರಾಗಿದ್ದಾರೆ.

ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT