ರಾಜ್ಯ

ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ವಿಧಾನ ಪರಿಷತ್​ನಲ್ಲಿ ಸೋಲು: ಸರ್ಕಾರಕ್ಕೆ ಮುಖಭಂಗ; ಜೈ ಶ್ರೀರಾಮ ಎಂದ ಬಿಜೆಪಿ

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ.

ಬೆಂಗಳೂರು: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದ್ದು, ಪ್ರತಿಪಕ್ಷ ಬಿಜೆಪಿ ಜೈ ಶ್ರೀರಾಮ ಘೋಷಣೆ ಕೂಗಿ ಸಂಭ್ರಮಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ವಿಧಾನ ಇಂದು ಪರಿಷತ್ ನಲ್ಲಿ ಮಂಡಿಸಿದರು.

ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, 2003ರಿಂದ ವಿಧೇಯಕ ಜಾರಿಯಲ್ಲಿದೆ. 2003ರ ಮೇ 1 ರಿಂದ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸಲಾಗುತ್ತಿದೆ. ಈಗಿರುವ ನಿಯಮದಂತೆ ಸರ್ಕಾರಕ್ಕೆ 8 ಕೋಟಿ ರೂ. ಸಲ್ಲಿಕೆ ಆಗುತ್ತಿದೆ ಎಂದರು. ಈಗಿನ‌ ಸಾಮಾನ್ಯ ಸಂಗ್ರಹಣ ನಿಧಿಯಿಂದ ಧಾರ್ಮಿಕ ಕೆಲಸ ಮಾಡಲಾಗಲ್ಲ. ಹೊಸ ನಿಯಮದಿಂದ 60 ಕೋಟಿ ರೂಪಾಯಿ ಹಣ ಸಂಗ್ರಹ ಆಗುತ್ತದೆ. ಸಿ ದರ್ಜೆಯ ದೇಗುಲಗಳನ್ನು ನಿರ್ವಹಿಸಲು ಇದರಿಂದ ಸಾಧ್ಯವಾಗುತ್ತದೆ ಎಂದರು.

ವಿಧೇಯಕದಲ್ಲಿದ್ದ ತಿದ್ದುಪಡಿ ಅಂಶಗಳಿಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತೀವ್ರ ಆಕ್ಷೇಪ ಮತ್ತು ವಿರೋಧವನ್ನು ವ್ಯಕ್ತಪಡಿಸಿದರು. ಒಂದು ಕೋಟಿಗಿಂತಲೂ ಹೆಚ್ಚು ಆದಾಯ ಇರುವ ದೇವಸ್ಥಾನಗಳ ಒಟ್ಟು ಆದಾಯದಿಂದ ಶೇಕಡ 10% ರಷ್ಟು ನಿಧಿ ಸಂಗ್ರಹಣೆ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ಪರ-ವಿರೋಧದ ಚರ್ಚೆಯ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ತಿದ್ದುಪಡಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ವಿಧೇಯಕದ ಪರವಾಗಿ ಏಳು ಮತಗಳು ಚಲಾವಣೆಯಾದರೆ, ವಿಧೇಯಕದ ವಿರುದ್ಧವಾಗಿ 18 ಮತಗಳು ಚಲಾವಣೆಯಾದವು. ಇದರೊಂದಿಗೆ ಸರ್ಕಾರ ಮಂಡಿಸಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್ ನಲ್ಲಿ ತಿರಸ್ಕೃತಗೊಂಡಿದೆ.

ಹಿಂದೂ ಧಾರ್ಮಿಕ ದತ್ತಿ ಮಸೂದೆ ತಿರಸ್ಕಾರಗೊಂಡ ನಂತರ ಪ್ರತಿಪಕ್ಷ ಬಿಜೆಪಿ ಸದಸ್ಯರು ಜೈ ಶ್ರೀರಾಮ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಭಾರತ್ ಮಾತಾ ಕಿ ಜೈ ಹಾಗೂ ಜೈ ಭೀಮ್ ಎಂದು ಘೋಷಣೆ ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT